Breaking News

ಕಳೆದ ನಾಲ್ಕು ದಿನಗಳಿಂದ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಯಾರೂ ಸಹಾ ಹಳ್ಳ ಅಥವಾ ನದಿಗಳನ್ನು ದಾಟುವ ಆತುರ ಮಾಡಬೇಡಿ: ರಮೇಶ್ ಜಾರಕಿಹೊಳಿ

Spread the love

ಬೆಳಗಾವಿ: ಜಿಲ್ಲೆಯಾದ್ಯಂತ, ಕಳೆದ ನಾಲ್ಕು ದಿನಗಳಿಂದ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಯಾರೂ ಸಹಾ ಹಳ್ಳ ಅಥವಾ ನದಿಗಳನ್ನು ದಾಟುವ ಆತುರ ಮಾಡಬೇಡಿ ಎಂದು ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ.

ಗೋಕಾಕ್ ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ನದಿ ಹಳ್ಳ ತುಂಬಿ ಹರಿಯುತ್ತಿವೆ. ನದಿ ಸಮೀಪದ ಗ್ರಾಮಸ್ಥರು ಜಾನುವಾರುಗಳನ್ನು ನದಿ, ಹಳ್ಳದ ತೀರದ ಕಡೆ ಬಿಡಬೇಡಿ. ಯಾರೂ ಸಹಾ ಹಳ್ಳ ಅಥವಾ ನದಿಗಳನ್ನು ದಾಟುವ ಆತುರ ಮಾಡಬೇಡಿ ಎಂದಿದ್ದಾರೆ.

ಇನ್ನೂ ಎರಡು ದಿನಗಳ ಕಾಲ ಮಳೆ ಹೀಗೆ ಮುಂದುವರಿಯುವ ಸಾಧ್ಯತೆಯಿದ್ದು, ರೈತರು ಹಾಗೂ ಸಾರ್ವಜನಿಕರು ಆದಷ್ಟು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ