Home / ಜಿಲ್ಲೆ / ಬೆಳಗಾವಿ / ಲಕ್ಷ್ಮೀ ಹೆಬ್ಬಾಳಕರ ಅವರು ಆಯೋಜಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ’ ಎಂದು ಮರಾಠಿ ನಟ,

ಲಕ್ಷ್ಮೀ ಹೆಬ್ಬಾಳಕರ ಅವರು ಆಯೋಜಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ’ ಎಂದು ಮರಾಠಿ ನಟ,

Spread the love

ಬೆಳಗಾವಿ: ‘ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ರಾಜಹಂಸಗಡದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಆಯೋಜಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ’ ಎಂದು ಮರಾಠಿ ನಟ, ಸಂಸದ ಅಮೋಲ್ ಕೋಲ್ಹೆ ತಿಳಿಸಿದ್ದಾರೆ.

 

ಈ ಬಗ್ಗೆ ತಮ್ಮ ಟ್ವಿಟರ್‌ನಲ್ಲಿ ವಿಡಿಯೊ ಹಾಕಿದ ಅವರು, ‘ಬೆಳಗಾವಿಯಲ್ಲಿ ಮಾರ್ಚ್‌ 5ರಂದು ಆಯೋಜಿಸಿದ ಕಾರ್ಯಕ್ರಮಕ್ಕೆ ಬರುವುದಾಗಿ ನಾನು ವಿಡಿಯೊ ಮೂಲಕ ಪ್ರಚಾರ ಮಾಡಿದ್ದೆ.

ಆಗ ‘ಬೆಳಗಾವಿ’ ಎಂಬ ಪದ ಬಳಸಿದ್ದಕ್ಕೆ ಎಂಇಎಸ್‌ ಹಾಗೂ ಮಹಾರಾಷ್ಟ್ರದ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಾನು ಯಾವತ್ತೂ ಎಂಇಎಸ್‌ ಹಾಗೂ ಮರಾಠಿಗರ ಭಾವನೆಗಳೊಂದಿಗೆ ನಿಲ್ಲುತ್ತೇನೆ.

ಮರಾಠಿಗರು ‘ಬೆಳಗಾಂವ’ ಪದ ಬಳಸುತ್ತಾರೆ. ‘ಬೆಳಗಾವಿ’ ಪದ ಬಳಸಿ ಅವಠಿಗರಿಗೆ ಬೇಸರ ಮಾಡಿದ್ದಕ್ಕೆ ನಾನು ವಿಷಾಧಿಸುತ್ತೇನೆ’ ಎಂದೂ ಎನ್‌ಸಿಪಿ ಮುಖಂಡರಾದ ಅಮೋಲ್‌ ಹೇಳಿದ್ದಾರೆ.

ರಂಗಭೂಮಿ, ಕಿರುತೆರೆ ಹಾಗೂ ಮರಾಠಿ ಚಲನಚಿತ್ರಗಳಲ್ಲಿ ಅಮೋಲ್‌ ಅವರು ಶಿವಾಜಿ ಮಹಾರಾಜರ ಪಾತ್ರಗಳನ್ನೇ ಹೆಚ್ಚಾಗಿ ನಿರ್ವಹಿಸಿ ಪ್ರಸಿದ್ಧಿ ಪಡೆದವರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ