Breaking News

ಅಂಕೋಲಾ ಹಾಗೂ ಭಟ್ಕಳ ನಿಲ್ದಾಣಗಳಲ್ಲಿ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಗೆ ರೈಲ್ವೆ ಇಲಾಖೆ ಅನುಮತಿ

Spread the love

ಶಿರಸಿ: ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರ ಕೋರಿಕೆಯ ಮೇರೆಗೆ ಅಂಕೋಲಾ ಹಾಗೂ ಭಟ್ಕಳ ನಿಲ್ದಾಣಗಳಲ್ಲಿ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಗೆ ರೈಲ್ವೆ ಇಲಾಖೆ ಅನುಮತಿ ನೀಡಿದೆ.

ಅಂಕೋಲಾ ನಿಲ್ದಾಣದಲ್ಲಿ ನಾಳೆ(ಮಾ.9)ಯಿಂದ ಕೊಚುವೆಲಿ- ಮುಂಬೈ ಎಕ್ಸ್ ಪ್ರೆಸ್ ರೈಲು ನಿಲುಗಡೆಯಾಗಲಿದೆ. ಭಟ್ಕಳ ನಿಲ್ದಾಣದಲ್ಲಿ ತಿರುವಂತನಪುರ-ಪನವೇಲ್ ನೇತ್ರಾವತಿ ಎಕ್ಸ್ ಪ್ರೆಸ್ ರೈಲು ನಿಲುಗಡೆಯಾಗಲಿದೆ.

ಈ ಮೂಲಕ ಅಂಕೋಲಾ‌ ಹಾಗೂ ಭಟ್ಕಳ ಭಾಗದ ಜನರ ದೀರ್ಘ ಕಾಲದ ಬೇಡಿಕೆಯನ್ನು ರೈಲ್ವೆ ಇಲಾಖೆ ಈಡೇರಿಸಿದಂತಾಗಿದೆ. ಈ ರೈಲುಗಳ ನಿಲುಗಡೆಗಾಗಿ ಈ ಹಿಂದೆ ಜನ ಮನವಿ ಮಾಡಿಕೊಂಡಿದ್ದ ಮೇರೆಗೆ ಅನಂತಕುಮಾರ ಹೆಗಡೆ ಅವರು ಬೇಡಿಕೆ ಈಡೇರಿಸಲು ಕೋರಿ ರೈಲ್ವೆ ಇಲಾಖೆಗೆ ಪತ್ರ ಬರೆದಿದ್ದರು. ಈ ರೈಲುಗಳ ನಿಲುಗಡೆಯಿಂದ ಕೇರಳ ಹಾಗೂ ಮುಂಬೈ ಕಡೆ ಹೋಗುವ ಹಾಗೂ ಬರುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಅದೇ ರೀತಿ ಹಿಸ್ಸಾರ್-ಕೊಯಿಮತ್ತೂರು ರೈಲಿಗೆ ಕುಮಟಾದಲ್ಲಿ ನಿಲುಗಡೆ ಕುರಿತ ಆದೇಶ ಸದ್ಯವೇ ಹೊರಡುವ ನಿರೀಕ್ಷೆ ಇದೆ ಎಂದು ಸಂಸದರ ಅನಂತ ಕುಮಾರ್‌ ಹೆಗಡೆ ಕಚೇರಿ ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ