Breaking News

ರಾಷ್ಟ್ರ ಮಟ್ಟದಲ್ಲಿ ವೈರಲ್ ಆಯ್ತು ವಿಡಿಯೋ; ನರ್ತಕಿ ಮೇಲೆ ಹಣ ತೂರಿದ ಕಾಂಗ್ರೆಸ್ ಮುಖಂಡ!

Spread the love

ಧಾರವಾಡ: ನಿನ್ನೆ ನರ್ತಕಿಯೊಬ್ಬರ ಮೇಲೆ ಹಣ ತೂರಿದ್ದ ಕಾಂಗ್ರೆಸ್​ ಮುಖಂಡನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದ್ದು ದಿನ ಬೆಳಗಾಗುವಷ್ಟರಲ್ಲಿ ಈ ಸುದ್ದಿ ಕಾಡ್ಗಿಚ್ಚಿನಂತೆ ಹರಡಿ ದೇಶದೆಲ್ಲೆಡೆ ವೈರಲ್ ಆಗಿದೆ. ಶಿವಶಂಕರ ಎಂಬ ಈ ಕಾಂಗ್ರೆಸ್ ಮುಖಂಡ ಧಾರವಾಡದವನು.

ಅಷ್ಟೇ ಅಲ್ಲದೇ ಈತ ಮಾಜಿ ಸಚಿವ ವಿನಯ ಕುಲಕರ್ಣಿ ಪರಮಾಪ್ತ ಕೂಡ.

ಶಿವಶಂಕರ ಹಂಪಣ್ಣವರ, ಮದುವೆಯೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ. ಅಲ್ಲೇ ನೃತ್ಯ ಕಾರ್ಯಕ್ರಮವೂ ನಡೆಯುತ್ತಿತ್ತು. ಈ ವೇಳೆ ಶಿವಶಂಕರ ಹಂಪಣ್ಣವರ ನೃತ್ಯಗಾರ್ತಿ ಮೇಲೆ ಹಣ ತೂರಿ ಕುಣಿದಿದ್ದಾನೆ.

ಇಷ್ಟೆಲ್ಲಾ ಆಗಿದ್ದು ಆತನ ಸ್ನೇಹಿತನ ಮಗಳ ಮದುವೆಯ ಅರಿಶಿನ ಕಾರ್ಯಕ್ರಮದಲ್ಲಿ! ಕೌಟುಂಬಿಕ ಕಾರ್ಯಕ್ರಮದಲ್ಲಿ ಹಣ ತೂರಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದ್ದು ವಿಡಿಯೋ ಮಾತ್ರ ರಾಷ್ಟ್ರಮಟ್ಟದಲ್ಲಿ ವೈರಲ್ ಆಗಿದೆ.


Spread the love

About Laxminews 24x7

Check Also

ಕಿತ್ತೂರು ರಾಣಿ ಚೆನ್ನಮ್ಮ ಕನ್ನಡ ನಾಟಕವನ್ನು ಪ್ರದರ್ಶಿಸುವ ಬೃಹತ್ ಯೋಜನೆಯಲ್ಲಿ ರಂಗಾಯಣ ತಂಡ ಕೆಲಸ ಮಾಡುತ್ತಿದೆ.

Spread the loveಧಾರವಾಡ, ಆಗಸ್ಟ್‌, 12: ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಹಿನ್ನಡೆ ಅನುಭವಿಸಿದ ಧಾರವಾಡ ರಂಗಾಯಣ ಮತ್ತೆ ಕಾರ್ಯಪ್ರವೃತ್ತವಾಗಿದೆ. 18ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ