Breaking News

ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಪುಟ್ಟ ಕಂದಮ್ಮನನ್ನು ರಕ್ಷಣೆ

Spread the love

ಯಾದಗಿರಿ: ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಪುಟ್ಟ ಕಂದಮ್ಮನನ್ನು ರಕ್ಷಣೆ ಮಾಡಲಾಗಿದೆ.

ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ರೋಜಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಭೀಮಾ ನದಿ ಹಿನ್ನೀರು ಗ್ರಾಮ ನಡುಗಡ್ಡೆಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಬೋಟ್ ಮೂಲಕ ಸಂಚಾರ ಮಾಡುತ್ತಿದ್ದರು.

ಹೀಗೆ ರಜಿಯಾ ಬೇಗಂ ಅವರು ಕೂಡ ತನ್ನ ಪುಟ್ಟ ಮಗುವಿನೊಂದಿಗೆ ತೆಪ್ಪದಲ್ಲಿ ತಮ್ಮ ಗ್ರಾಮಕ್ಕೆ ತೆರಳಿದ್ದಾರೆ. ಈ ವೇಳೆ ಏಕಾಏಕಿ ತೆಪ್ಪ ಅಲುಗಾಡಿ ಮಗು ರಜಿಯಾ ಅವರ ಕೈಯಿಂದ ಜಾರಿ ಬಿದ್ದು, ನದಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿತ್ತು.

ಕೂಡಲೇ ತೆಪ್ಪ ನಡೆಸುವವರ ಗಮನಕ್ಕೆ ಬಂದಿದ್ದು, ಅವರ ಸಮಯ ಪ್ರಜ್ಞೆಯಿಂದ ಮಗುವನ್ನು ರಕ್ಷಣೆ ಮಾಡಿ ತಾಯಿಯ ಮಡಿಲಿಗೆ ಒಪ್ಪಿಸಲಾಗಿದೆ.


Spread the love

About Laxminews 24x7

Check Also

ವೀರಭದ್ರ ನಗರದ ದಶಕಗಳ ಸಮಸ್ಯೆಗೆ ಮುಕ್ತಿ: ಹೊಸ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ!

Spread the loveಬೆಳಗಾವಿಯ ವೀರಭದ್ರ ನಗರದ 0 ಕ್ರಾಸ್ ನಿವಾಸಿಗಳ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ಮಳೆಗಾಲದಲ್ಲಿ ರಸ್ತೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ