Breaking News

ಸಾರಿಗೆ ನೌಕರರ ವೇತನ ಶೇ10 ರಷ್ಟು ಹೆಚ್ಚಿಸಲು ಕ್ರಮ: ಸಚಿವ ಬಿ.ಶ್ರೀರಾಮುಲು

Spread the love

ರಾಯಚೂರು: ಆರ್ಥಿಕ ಇಲಾಖೆ ಮತ್ತು ಮುಖ್ಯಮಂತ್ರಿಯೊಂದಿಗೆ ಸಮಾಲೋಚಿಸಿ ಸಾರಿಗೆ ನೌಕರರ ವೇತನವನ್ನು ಶೇ 10 ರಷ್ಟು ಹೆಚ್ಚಿಸಲು ಕ್ರಮ ವಹಿಸಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ನೌಕರರ ಸಂಘದೊಂದಿಗೆ ಮಾತುಕತೆ ನಡೆಸಿದ್ದು, ಶೀಘ್ರದಲ್ಲೆ ಸಿಹಿ ಸುದ್ದಿ ನೀಡಲಾಗುವುದು ಎಂದರು.

 

ಬೆಂಗಳೂರಿನಲ್ಲಿ ಸಜೀವವಾಗಿ ದಹನವಾಗಿರುವ ಬಸ್‌ ಚಾಲಕನ ಕುಟುಂಬಕ್ಕೆ ತಕ್ಷಣ ₹5 ಲಕ್ಷ ಪರಿಹಾರ ನೀಡಬೇಕು, ವಿಮಾ ಪರಿಹಾರ

ಒದಗಿಸಬೇಕು ಹಾಗೂ ಕುಟುಂಬದವರೊಬ್ಬರಿಗೆ ಉದ್ಯೋಗ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಘಟನೆ ನಡೆಯುವುದಕ್ಕೆ ಕಾರಣ ಪತ್ತೆ ಹಚ್ಚಲು ತಿಳಿಸಲಾಗಿದೆ ಎಂದು ಹೇಳಿದರು.


Spread the love

About Laxminews 24x7

Check Also

ಮಂತ್ರಾಲಯದಲ್ಲಿ ರಾಘವೇಂದ್ರ ರಾಜಕುಮಾರ್‌ಗೆ ಫ್ಲೋರಿಡಾ ವಿವಿ ಗೌರವ ಡಾಕ್ಟರೇಟ್ ಪ್ರದಾನ – ಶ್ರೀಗಳಿಂದ ಸನ್ಮಾನ

Spread the loveರಾಯಚೂರು: ಮಂತ್ರಾಲಯದಲ್ಲಿ ರಾಯರ ಗುರುವೈಭವೋತ್ಸವ ಸಂಭ್ರಮ ಮನೆಮಾಡಿದ್ದು, ಮಠದ ಕಾರ್ಯಕ್ರಮದಲ್ಲಿ ಅಮೆರಿಕದ ಫ್ಲೋರಿಡಾ ವಿವಿಯ ಗೌರವ ಡಾಕ್ಟರೇಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ