Breaking News
Home / ರಾಜಕೀಯ / ಕೊಪ್ಪಳದ ಗವಿಮಠ ದರ್ಶನ ಪಡೆದ ಅಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮಾ

ಕೊಪ್ಪಳದ ಗವಿಮಠ ದರ್ಶನ ಪಡೆದ ಅಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮಾ

Spread the love

ಕೊಪ್ಪಳ: ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ್‌ ಬಿಸ್ವಾ ಶರ್ಮಾ ಸೋಮವಾರ ಕೊಪ್ಪಳಕ್ಕೆ ಭೇಟಿ ನೀಡಿದರು‌.

ಇಲ್ಲಿನ ಪ್ರಸಿದ್ಧ ಗವಿಮಠಕ್ಕೆ ಬಂದು ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರೊಂದಿಗೆ ಕೆಲ ಹೊತ್ತು ಚರ್ಚಿಸಿ ಮಠದ ಪರಂಪರೆ, ಇತಿಹಾಸ, ಜಾತ್ರೆಯ ವಿಶೇಷತೆ, ಜಾತ್ರೆಗೆ ಬರುವ ಭಕ್ತರಿಗೆ ಊಟದ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಉಚಿತ ಪ್ರಸಾದ ವ್ಯವಸ್ಥೆ ಹೀಗೆ ಹಲವು ಮಾಹಿತಿಗಳನ್ನು ಪಡೆದುಕೊಂಡರು.

 

ಅಸ್ಸಾಂನಲ್ಲಿರುವ ವಾತಾವರಣ, ಅಲ್ಲಿನ ಜನರ ಬಗ್ಗೆ ಸ್ವಾಮೀಜಿ‌ ಮಾಹಿತಿ ಪಡೆದರು. ಇದೆ ವೇಳೆ ಬಿಸ್ವಾ ಅಸ್ಸಾಂಗೆ ಬರುವಂತೆ ಆಹ್ವಾನ ನೀಡಿದರು.

ಇಲ್ಲಿಂದ ಅವರು ಗಂಗಾವತಿಯಲ್ಲಿ ಆಯೋಜನೆಯಾಗಿರುವ ಬಿಜೆಪಿ ರೋಡ್‌ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿದರು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ