Breaking News

ರಾಜ್ಯೋತ್ಸವದ ದಿನ ಕಪ್ಪು ದಿನ ಆಚರಿಸಲು,ಅನುಮತಿನೀಡುವಂತೆ,M.E.S.ಮನವಿ

Spread the love

ಬೆಳಗಾವಿ- ಸೋತರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ,ಬೆಳಗಾವಿಯಲ್ಲಿ ಅಸ್ತಿತ್ವ ಕಳೆದುಕೊಂಡು,ಸಮಾಧಿ ಯಾಗಿರುವ ಮಹಾರಾಷ್ಟ್ರ ಏಕೀಕರಣ ಸಮೀತಿ ಈ ವರ್ಷ ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸಲು ಅನುಮತಿ ನೀಡುವಂತೆ ಮತ್ತೆ ಕ್ಯಾತೆ ತೆಗೆದಿದೆ.

ರಾಜ್ಯದಲ್ಲಿ ಕೋವೀಡ್ ಇದೆ,ಈ ವರ್ಷ,ದಸರಾ ಉತ್ಸವ,ಕಿತ್ತೂರು ಉತ್ಸವ ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿದೆ.ಜೊತೆಗೆ ರಾಜ್ಯೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದ ಬೆನ್ನಲ್ಲಿಯೇ ನಿನ್ನೆ ಶುಕ್ರವಾರ ಎಂ ಈ ಎಸ್ ಮುಖಂಡರು ದೀಪಕ ದಳವಿ ಅವರ ನೇತ್ರತ್ವದಲ್ಲಿ ಬೆಳಗಾವಿ ನಗರ ಪೋಲಿಸ್ ಆಯುಕ್ತ ತ್ಯಾಗರಾಜನ್ ಅವರನ್ನು ಭೇಟಿಯಾಗಿದ್ದಾರೆ.ಈ ವರ್ಷ ರಾಜ್ಯೋತ್ಸವದ ದಿನ ಕಪ್ಪು ದಿನ ಆಚರಿಸಲು,ಅನುಮತಿನೀಡುವಂತೆ,ಎಂ ಈ ಎಸ್ ಕಂಗಾಲ್ ಕಂಪನಿ ಮನವಿ ಸಲ್ಲಿಸಿ,ಕನ್ನಡಿಗರ ಹಬ್ಬದ ದಿನ ಮತ್ತೆ ಕ್ಯಾತೆ ತೆಗೆಯಲು ಮುಂದಾಗಿದೆ.

 


Spread the love

About Laxminews 24x7

Check Also

ತಮ್ಮ ವಿರುದ್ದ ದಾಖಲಾಗಿರುವ ಎಫ್​ಐಆರ್ ಕುರಿತು ಪ್ರತಿಕ್ರಿಯಿಸಿದಚಿದಾನಂದ ಸವದಿ

Spread the loveಚಿಕ್ಕೋಡಿ (ಬೆಳಗಾವಿ) : ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಷಡ್ಯಂತ್ರದ ವಿರುದ್ಧ ಅಥಣಿ ಮತಕ್ಷೇತ್ರದ ರೈತಬಾಂಧವರು ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ