Breaking News

ಸಾರಿಗೆ ನೌಕರರಿಗೆ ಶೇ 15ರಷ್ಟು ವೇತನ ಹೆಚ್ಚಳ: ಸಚಿವ ಶ್ರೀರಾಮುಲು ಹೇಳಿಕೆ

Spread the love

ಬೆಂಗಳೂರು: ಸಾರಿಗೆ ಇಲಾಖೆ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಗುರುವಾರ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಶೇ.15 ರಷ್ಟು ವೇತನ ಹೆಚ್ಚಳ ಮಾಡೋಕೆ ನಿರ್ಧಾರ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

 

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಳೆದ 27 ವರ್ಷಗಳಲ್ಲಿ ಅತ್ಯಧಿಕ ವೇತನ ಪರಿಷ್ಕರಣೆಯನ್ನು ನಮ್ಮ ಸರ್ಕಾರ ಈಗ ಮಾಡಿದೆ ಎಂದು ಹೇಳಿದ್ದಾರೆ.

ಈ ನಿರ್ಧಾರದಿಂದ ರಾಜ್ಯದ ಎಲ್ಲ ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ಅಂದಾಜು ₹550 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ.

ಇದು ನಮ್ಮ ಸಿಬ್ಬಂದಿಗೆ ಶುಭ ಸುದ್ದಿ ಆಗಿದ್ದು, ಸದಾ ಉತ್ತಮ ಜನಸೇವೆಗೆ ಹೆಸರು ಮಾಡಿರೋ ನಮ್ಮ ಸಿಬ್ಬಂದಿ, ತಾವು ನೀಡಿರುವ ಬಂದ್ ಕರೆ ಹಿಂಪಡೆದು ಎಂದಿನಂತೆ ಉತ್ತಮ ಸೇವೆಗಳನ್ನು ಯಾವುದೇ ವ್ಯತ್ಯಯ ಆಗದಂತೆ ಮುಂದುವರಿಸಲಿದ್ದಾರೆ ಎಂಬ ನಂಬಿಕೆ ಇದೆ ಎಂದು ರಾಮುಲು ತಿಳಿಸಿದ್ದಾರೆ.

ಶೇ 20 ರಷ್ಟು ವೇತನ ಹೆಚ್ಚಳಕ್ಕೆ ಪಟ್ಟು ಹಿಡಿದಿರುವ ಸಾರಿಗೆ ನಿಗಮಗಳ ನೌಕರರು ಇದೇ ಮಾರ್ಚ್ 24 ರಂದು ರಾಜ್ಯದಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದರು. ರಾಜ್ಯ ಸರ್ಕಾರ ಶೇ 14 ರಷ್ಟು ಮಾಡಬಹುದು ಎನ್ನಲಾಗಿತ್ತು. ಆದರೆ, ಇದೀಗ ಶೇ 15 ರಷ್ಟು ವೇತನ ಹೆಚ್ಚಳ ಮಾಡಿದೆ.

 

 

 


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ