Breaking News

ಕೇಂದ್ರ ಸಚಿವೆ ಸ್ಮೃತಿ ಇರಾನಿ ರೋಡ್ ಶೋ

Spread the love

ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ನಗರದಲ್ಲಿ ಗುರುವಾರ ಬೃಹತ್ ರೋಡ್ ಶೋ ನಡೆಸಿದರು.

ನಗರದ ಮುಳಗುಂದ ನಾಕಾದಿಂದ ಆರಂಭವಾದ ರೋಡ್ ಶೋ ರಾಚೋಟೇಶ್ವರ ದೇವಸ್ಥಾನ ರಸ್ತೆ, ಬಸವೇಶ್ವರ ಸರ್ಕಲ್, ಸ್ಟೇಷನ್ ರಸ್ತೆ, ಮಹೇಂದ್ರಕರ್ ಸರ್ಕಲ್ ಮಾರ್ಗವಾಗಿ ಸಾಗಿತು.

 

ರೋಡ್ ಶೋನಲ್ಲಿ ಸಚಿವರಾದ ಸಿ.ಸಿ. ಪಾಟೀಲ, ಗೋವಿಂದ ಕಾರಜೋಳ, ಸಂಸದ ಶಿವಕುಮಾರ್ ಉದಾಸಿ, ಮುಖಂಡ ಅನಿಲ‌ ಮೆಣಸಿನಕಾಯಿ, ಸೇರಿ ಹಲವಾರು ನಾಯಕರು ಭಾಗಿಯಾಗಿದ್ದರು.

ರೋಡ್ ಶೋನಲ್ಲಿ ನೂರಾರು ಬೈಕ್ ಗಳ ರ್ಯಾಲಿ, ಆಟೋ ರ್ಯಾಲಿ ನಡೆಯಿತು. ಮೆರವಣಿಗೆಯುದ್ದಕ್ಕೂ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಜಯಘೋಷ ಹಾಕುತ್ತ ಸಾಗಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ