Breaking News

ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಟಿಕೆಟ್ ಆಕಾಂಕ್ಷಿಗಳ ಮಹತ್ವದ ಸಭೆ

Spread the love

ಬೆಳಗಾವಿ: ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಂಬಂಧ ಕಾಂಗ್ರೆಸ್ ಪಕ್ಷದ ಮಹತ್ವದ ಸಭೆ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆಯಿತು.

ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಪ್ರಮುಖ ನಾಯಕರು, ಶಾಸಕರು ಮಾಜಿ ಶಾಸಕರು ಹಾಗೂ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

 

ಬೆಳಗಾವಿ ಧಾರವಾಡ ಗದಗ ಹಾವೇರಿ ಸೇರಿದಂತೆ 10 ಜಿಲ್ಲೆಗಳ ಪ್ರಮುಖ ಮುಖಂಡರು ಮತ್ತು ಟಿಕೆಟ್ ಆಕಾಂಕ್ಷೆಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಇದಲ್ಲದೆ ಸಭೆಯಲ್ಲಿ ಇದೇ ದಿನಾಂಕ 20 ರಂದು ಬೆಳಗಾವಿಗೆ ಭೇಟಿ ನೀಡಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನಡೆಸುವ ಬಗ್ಗೆ ಸಹ ಚರ್ಚೆ ನಡೆಸಲಾಯಿತು.


Spread the love

About Laxminews 24x7

Check Also

ಚೈನ್ನೈನ 16ನೇ ಐ.ಎ.ಪಿ.ಎಚ್.ಡಿ ಸ್ನಾತಕೋತ್ತರ ಸಮಾವೇಶದಲ್ಲಿ ಬೆಳಗಾವಿಯ ಕೆಎಲ್‌ಇ ವಿಕೆ ದಂತ ವಿಜ್ಞಾನ ವಿಭಾಗದ ಉತ್ತಮ ಪ್ರದರ್ಶನ

Spread the love ಚೈನ್ನೈನ 16ನೇ ಐ.ಎ.ಪಿ.ಎಚ್.ಡಿ ಸ್ನಾತಕೋತ್ತರ ಸಮಾವೇಶದಲ್ಲಿ ಬೆಳಗಾವಿಯ ಕೆಎಲ್‌ಇ ವಿಕೆ ದಂತ ವಿಜ್ಞಾನ ವಿಭಾಗದ ಉತ್ತಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ