Breaking News

ಹೆರಿಗೆ ಮಾಡಿಸಲು ಹಣ ಕೇಳಿದ್ದ ಪ್ರಕರಣ ಡಾ.ಪಲ್ಲವಿ ಪೂಜಾರಿ ಅಮಾನತು

Spread the love

ಹೆರಿಗೆ ಮಾಡಿಸಲು ಹಣ ಕೇಳಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸೂತಿ ಹಾಗೂ ಸ್ತ್ರೀ ರೋಗ ತಜ್ಞೆ ಡಾ.ಪಲ್ಲವಿ ಪೂಜಾರಿ ಅವರನ್ನು ಅಮಾನತುಗೊಳಿಸಿ ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್ ಆರ್.ಆದೇಶ ಹೊರಡಿಸಿದ್ದಾರೆ.

ಹೆರಿಗೆಗಾಗಿ ಸಂಗೀತಾ ಎಂಬ ಗರ್ಭಿಣಿ ಆಸ್ಪತ್ರೆಗೆ ಬಂದಿದ್ದರು. ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಲು ಡಾ.ಪಲ್ಲವಿ 10 ಸಾವಿರ ಹಣ ಕೇಳಿದ್ದಾರೆ. ಅಷ್ಟೊಂದು ಹಣ ತಮ್ಮ ಬಳಿ ಇಲ್ಲ ಎಂದು ಸಂಗೀತಾ ಹೇಳಿದ್ದಾರೆ. ಹಣ ತರದೆ ಹೆರಿಗೆ ಮಾಡಿಸಲು ನಿರಾಕರಿಸಿದ್ದಾರೆ.

ಸಂಗೀತಾ ಹಲವೆಡೆ ವಿಚಾರಿಸಿ ಹಣ ಜೋಡಿಸಿ ತಂದ ಬಳಿಕ ವೈದ್ಯೆ ಹೆರಿಗೆ ಮಾಡಿಸಿದ್ದಾರೆ. ಹೆರಿಗೆಗೆ ತಡವಾಗಿದ್ದರಿಂದ ಮಗು ಗರ್ಭದಲ್ಲಿಯೇ ಸಾವನ್ನಪ್ಪಿದೆ. ಇದರಿಂದ ರೊಚ್ಚಿಗೆದ್ದ ಕುಟುಂಬದವರು ಮಗು ಸಾವಿಗೆ ವೈದ್ಯೆ ಡಾ.ಪಲ್ಲವಿ ನಿರ್ಲಕ್ಷವೇ ಕಾರಣ ಎಂದು ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಕರ್ತವ್ಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಹಿನ್ನೆಲೆಯಲ್ಲಿ ಡಾ.ಪಲ್ಲವಿ ಅವರನ್ನು ಜಿಲ್ಲಾಧಿಕಾರಿ ಅಮಾನತುಗೊಳಿಸಿದ್ದಾರೆ.


Spread the love

About Laxminews 24x7

Check Also

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Spread the loveಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ