Breaking News

BJP ಟಿಕೆಟ್‌ ಆಕಾಂಕ್ಷಿ ನಾಗೇಶ ಮನ್ನೋಳಕರ ಹಾಗೂ ನಾಗೇಂದ್ರ ನಾಯಿಕ ವಿರುದ್ಧ ಶುಕ್ರವಾರ F,I,R, ದಾಖಲ

Spread the love

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಂತಿ ಬಸ್ತವಾಡ ಗ್ರಾಮದಲ್ಲಿ ಮಾರ್ಚ್‌ 15ರಂದು ಮಾಂಸಾಹಾರ ಊಟದ ವ್ಯವಸ್ಥೆ ಮಾಡಿದ ಆರೋಪದ ಮೇರೆಗೆ, ಬಿಜೆಪಿ ಟಿಕೆಟ್‌ ಆಕಾಂಕ್ಷಿ ನಾಗೇಶ ಮನ್ನೋಳಕರ ಹಾಗೂ ನಾಗೇಂದ್ರ ಬಾಳಪ್ಪ ನಾಯಿಕ ಅವರ ವಿರುದ್ಧ ಶುಕ್ರವಾರ ಎಫ್‌ಐಆರ್‌ ದಾಖಲಿಸಲಾಗಿದೆ.

 

ಮತದಾರರಿಗೆ ಆಮಿಷ ಒಡ್ಡುವ ಉದ್ದೇಶದಿಂದ ಅಂದು ರಾತ್ರಿ 9ಕ್ಕೆ ಸುಮಾರು 3,000 ಮಂದಿಗೆ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಚುನಾವಣಾ ತುರ್ತು ಪರಿಶೀಲನಾ ತಂಡ ದಾಳಿ ನಡೆಸಿತು.

‘ಚುನಾವಣಾ ಆಯೋಗದ ಸೂಚನೆ ಉಲ್ಲಂಘಿಸಿದ ಆರೋಪದ ಮೇಲೆ ಅಡುಗೆಗೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆದು, ಇಬ್ಬರ ಮೇಲೆ
ಪ್ರಕರಣ ದಾಖಲಿಸಲಾಗಿದೆ’ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ