Breaking News

ಬೆಳಗಾವಿ: ಸೀಜ್ ಮಾಡಿದ್ದ ಸಾರಾಯಿ ಬಾಕ್ಸ್ ಗಳನ್ನೇ ಕದ್ದ ಅಬಕಾರಿ ಅಧಿಕಾರಿಗಳು

Spread the love

ಬೆಳಗಾವಿ: ಇದು ಬೇಲಿಯೇ ಎದ್ದು ಹೊಲಮೇಯ್ದ ಕಥೆ. ಜಪ್ತಿ ಮಾಡಿದ್ದ ಸಾರಾಯಿ ಬಾಕ್ಸ್ ಗಳ ಪೈಕಿ 301 ಬಾಕ್ಸ್ ಗಳನ್ನೇ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಳ್ಳತನ ಮಾಡಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.

ಖಾನಾಪುರ ತಾಲೂಕಿನ ಮೋದೆಕೊಪ್ಪ ಗ್ರಾಮದ ಬಳಿ ಗೋವಾದಿಂದ ಸಾಗಿಸಲಾಗುತ್ತಿದ್ದ 753 ಸಾರಾಯಿ ಬಾಕ್ಸ್ ಗಳನ್ನು ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದರು. ಜಪ್ತಿಮಾಡಿದ್ದ ಮಾರನೇ ದಿನವೇ 301 ಬಾಕ್ಸ್ ಗಳನ್ನು ಅಬಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಳ್ಳತನ ಮಾಡುವ ಮೂಲಕ ಹಿರಿಯ ಅಧಿಕಾರಿಗಳೇ ತಲೆತಗ್ಗಿಸುವ ಕೆಲಸ ಮಾಡಿದ್ದಾರೆ.

ಪ್ರಕರಣ ಸಂಬಂಧ ಅಬಕಾರಿ ನಿರೀಕ್ಷಕ ದಾವಲಸಾಬ ಸಿಂದೋಗಿ, ಸದಾಶಿವ ಕೊರ್ತಿ, ಅಬಕಾರಿ ಉಪ ನಿರೀಕ್ಷಕಿ ಪುಷ್ಪಾ ಗಡಾದಿ ಸೇರಿದಂತೆ ಐವರು ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡುಇಸಲಾಗಿದ್ದು, ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ