Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿ ಮಹಾನಗರ ಪಾಲಿಕೆ  ಚುನಾವಣೆಕೋರ್ಟ್ ಆದೇಶ ಗಮನದಲ್ಲಿಟ್ಟುಕೊಂಡು ಶೀಘ್ರ ಚುನಾವಣೆ ನಡೆಸಲು  ಕ್ರಮ

ಬೆಳಗಾವಿ ಮಹಾನಗರ ಪಾಲಿಕೆ  ಚುನಾವಣೆಕೋರ್ಟ್ ಆದೇಶ ಗಮನದಲ್ಲಿಟ್ಟುಕೊಂಡು ಶೀಘ್ರ ಚುನಾವಣೆ ನಡೆಸಲು  ಕ್ರಮ

Spread the love

ಬೆಳಗಾವಿ:  ದೂರು ದಾಖಲಿಸುವ ಅಭ್ಯರ್ಥಿಗಳ ಧ್ವನಿ ಅಡಗಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಬೆಳಗಾವಿಯಲ್ಲಿ  ತಿರುಗೇಟು ನೀಡಿದ್ದು, ಡಿಕೆಶಿಯವರು ಹತಾಶರಾಗಿದ್ದಾರೆ ಎಂದಿದ್ದಾರೆ.

ನಗರದಲ್ಲಿ  ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಗೋಕಾಕ ಉಪ ಚುನಾವಣೆಯಲ್ಲಿ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ದವೂ ದೂರು ದಾಖಲಾದ ಉದಾಹರಣೆಯಿದೆ.  ಸಣ್ಣ ವಿಷಯ ದೊಡ್ಡದು ಮಾಡುವ ಅವಶ್ಯಕತೆ ಇಲ್ಲ, ಕಾನೂನು ಪ್ರಕಾರ ನಡೆಯತ್ತೆ ಎಂದರು.

ಪೊಲೀಸರು ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದಷ್ಟೇ ಹೇಳಿದರು.

ಕೋವಿಡ್, ಲಾಕ್ ಡೌನ್ ಹಿನ್ನೆಲೆಯಲ್ಲಿ  ಬೆಳಗಾವಿ ಅಭಿವೃದ್ದಿ ಕೆಲಸಗಳು ಹಿನ್ನೆಡೆಯಾಗಿವೆ. ಸದ್ಯ ಅಭಿವೃದ್ದಿ ಕೆಲಸಗಳಿಗೆ ಸ್ಪೀಡ್ ಅಪ್ ನೀಡಲಾಗುವುದು.  ಮಧ್ಯಾಹ್ನ ಅಧಿಕಾರ ಸಭೆ ಆಹ್ವಾನಿಸಿದ್ದೇನೆ. ಅಭಿವೃದ್ದಿ ಕೆಲಸಗಳ ಕುರಿತು ಚರ್ಚೆಸಲಾಗುವುದು. ಇತ್ತೀಚಿಗೆ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ ಎಂದರು.

ಬೆಳೆ ಹಾನಿ ಸಮೀಕ್ಷೆ ವಿಚಾರವಾಗಿ  ಮಾತನಾಡಿ,  ಜಿಲ್ಲೆಯಲ್ಲಿ  ಬೆಳೆ ಹಾನಿ ಸಮೀಕ್ಷೆ ಸರಿಯಾಗಿ ನಡೆದಿಲ್ಲ  ಎಂಬ  ಮಾಹಿತಿ ನನ್ನ ಗಮನಕ್ಕೆ ಬಂದಿದೆ. ಮತ್ತಿಮ್ಮೊ ಸಮೀಕ್ಷೆ ಸಡೆಸಲು ಸೂಚನೆ ನೀಡಿದ್ದಾರೆ. ಶೀಘ್ರ ಬೆಳೆ ಹಾನಿ ಪರಿಹಾರ ಒದಗಿಸುವ ಕ್ರಮ ಕೈಗೊಳ್ಳಲಾಗುವುದು  ಎಂದರು.

ಬೆಳಗಾವಿ ಮಹಾನಗರ ಪಾಲಿಕೆ  ಚುನಾವಣೆ ವಾರ್ಡ್ ಹಂಚಿಕೆ ವಿಚಾರದಲ್ಲಿ  ಕೋರ್ಟ್ ನಲ್ಲಿ ವ್ಯಾಜ್ಯ ನಡೆಯುತ್ತಿರುವ ಸಂಬಂಧ ತಡವಾಗಿದೆ.  ಕೋವಿಡ್ ನಿಯಮ ಪಾಲನೆ, ಕೋರ್ಟ್ ಆದೇಶ ಗಮನದಲ್ಲಿಟ್ಟುಕೊಂಡು ಶೀಘ್ರ ಚುನಾವಣೆ ನಡೆಸಲು  ಕ್ರಮ ಕೈಗೊಳ್ಳಲಾಗುವುದು- ರಮೇಶ ಜಾರಕಿಹೊಳಿ, ಬೆಳಗಾವಿ ಜಿಲ್ಲಾ ಉಸ್ತುವಾರಿ, ಜಲಸಂಪನ್ಮೂಲ ಸಚಿವ, 

ಈ ಸಂದರ್ಭದಲ್ಲಿ  ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ್, ಮುಂತಾದವರು ಇದ್ದರು.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ