Breaking News
Home / ರಾಜಕೀಯ / ಮನನೊಂದು ನೇಣು ಬಿಗಿದುಕೊಂಡ 13ರ ಬಾಲಕಿ!

ಮನನೊಂದು ನೇಣು ಬಿಗಿದುಕೊಂಡ 13ರ ಬಾಲಕಿ!

Spread the love

ಕೊಡಗು: ಒಂದು ವಾರದಿಂದ ಖಿನ್ನತೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡ್ಲಿಪೇಟೆ ಸಮಿಪದ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ. 13 ವರ್ಷದ ವೈಷ್ಣವಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ.

 

 

ಕೊಡ್ಲಿಪೇಟೆ ಸಮಿಪದ ಶಿವರಳ್ಳಿ ಗ್ರಾಮದ ಜಿತೇಂದ್ರ-ಅಕ್ಷತ ದಂಪತಿ ಪುತ್ರಿ ವೈಷ್ಣವಿ ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ವ್ಯಾಸಾಂಗ ಮಾಡುತಿದ್ದಳು. ಕಳೆದ ಒಂದು ವಾರದಿಂದ ಖಿನ್ನತೆಯ ಸಮಸ್ಯೆಯಿಂದ ಬಳಲುತ್ತಿದ್ದಳು.

ವಿದ್ಯಾರ್ಥಿನಿ ವೈಷ್ಣವಿ ಶನಿವಾರ ಸಂಜೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ