Breaking News

ಮಂಗಳೂರು ದಸರಾಕ್ಕೆ ವಿದ್ಯುಕ್ತ ಚಾಲನೆ ನೀಡಿದ ಕೊರೊನಾ ವಾರಿಯರ್

Spread the love

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ದೊರೆಯಿತು.

ಕೊರೊನಾ ವಾರಿಯರ್ ಎನ್.ಆರ್.ಐ ಫೋರಂನ ಮಾಜಿ ಉಪಾಧ್ಯಕ್ಷೆ, ಚಿಕ್ಕಮಗಳೂರು ಮೂಲದ ಡಾ.ಆರತಿ ಕೃಷ್ಣ ಈ ಬಾರಿಯ ಮಂಗಳೂರು ದಸರಾಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರದಲ್ಲಿ ಗಣಪತಿ, ಶಾರದಾ ಮಾತೆ, ನವದುರ್ಗೆಯರು ಹಾಗೂ ಆದಿಶಕ್ತಿಯ ಮಣ್ಣಿನ ಮೂರ್ತಿಗಳನ್ನು ಏಕಕಾಲದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.

ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿಯವರ ಆಶಯದಂತೆ ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ನಮ್ಮ ದಸರಾ-ನಮ್ಮ ಸುರಕ್ಷೆ ಎಂಬ ಘೋಷ ವಾಕ್ಯದೊಂದಿಗೆ ಇಂದಿನಿಂದ 10 ದಿನಗಳ ಕಾಲ ನಡೆಯಲಿದೆ. ಅಕ್ಟೋಬರ್ 26 ರಂದು ದಸರಾ ವಿಸರ್ಜನಾ ಪೂಜೆ ನಡೆದು ಬಳಿಕ ಕ್ಷೇತ್ರದ ಆವರಣದಲ್ಲೇ ಮೂರ್ತಿಗಳ ಮೆರವಣಿಗೆ ನಡೆಸಿ ಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜಿಸಲಾಗುವುದು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ