Breaking News

ರಾಮನವಮಿ ಮೆರವಣಿಗೆಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಗಂಭೀರ ಹಲ್ಲೆ

Spread the love

ಬೆಳಗಾವಿ: ರಾಮನವಮಿ ಮೆರವಣಿಗೆ ವೇಳೆ ಕನ್ನಡ ಬಾವುಟ ಪ್ರದರ್ಶಿಸಿದ್ದಕ್ಕಾಗಿ ಯುವಕನೊಬ್ಬನ ಮೇಲೆ ಗಂಭೀರ ಹಲ್ಲೆ ನಡೆಸಲಾಗಿದೆ.

 

 

 

 

 

 

 

 

 

 

ನಗರದ ರಾಮಲಿಂಗಖಿಂಡಗಲ್ಲಿಯಲ್ಲಿ ಈ ಘಟನೆ ನಡೆದಿದೆ. ರಾಮನವಮಿ ಮೆರವಣಿಗೆ ಶಿವಸೇನೆ ಕಚೇರಿ ಎದುರಿನಿಂದ ಹಾದು ಹೋಗುತ್ತಿದ್ದ ವೇಳೆ ಕೈಯ್ಯಲ್ಲಿ ಕನ್ನಡ ಬಾವುಟ ಹಿಡಿದಿದ್ದ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ.

ಇದರಿಂದಾಗಿ ಕನ್ನಡಿಗ ಯುವಕನ ಬೆನ್ನು, ಹೊಟ್ಟೆಗೆ ತೀವ್ರ ಗಾಯಗಳಾಗಿವೆ. ಈ ಕುರಿತು ಕನ್ನಡ ಹೋರಾಟಗಾರರು ನೀಡಿದ ದೂರಿನ ಆಧಾರದಲ್ಲಿ ಖಡೇಬಜಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ