Breaking News
Home / ಜಿಲ್ಲೆ / ಬೆಳಗಾವಿ / ರಾಹುಕಾಲದಲ್ಲೇ ನಾಮಪತ್ರ,ಪ್ರಚಾರಕ್ಕೂ ಸ್ಮಶಾನ ದಲ್ಲೇ ಚಾಲನೆ‌: ಸತೀಶ ಜಾರಕಿಹೊಳಿ

ರಾಹುಕಾಲದಲ್ಲೇ ನಾಮಪತ್ರ,ಪ್ರಚಾರಕ್ಕೂ ಸ್ಮಶಾನ ದಲ್ಲೇ ಚಾಲನೆ‌: ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ಈ ಬಾರಿಯೂ ರಾಹುಕಾಲದಲ್ಲಿಯೇ ನಾಮಪತ್ರ ಸಲ್ಲಿಸುತ್ತೇನೆ. ಚುನಾವಣಾ ಪ್ರಚಾರದ ವಾಹನಕ್ಕೆ ಶ್ಮಶಾನದಿಂದಲೇ ಚಾಲನೆ ನೀಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು.

ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎ.13ರಿಂದ 20ರ ಮಧ್ಯೆ ರಾಹುಕಾಲದಲ್ಲೇ ನಾಮಪತ್ರ ಸಲ್ಲಿಸುತ್ತೇನೆ.

ಇದು ಕೆಟ್ಟದ್ದು ಅಂತ ಯಾರು ಹೇಳುತ್ತಾರೆ. ಇದು ನಮ್ಮ ವಿಚಾರ. ಕಳೆದ ಮೂವತ್ತು ವರ್ಷಗಳಿಂದ ಬಸವಣ್ಣನವರು, ಡಾ|ಬಾಬಾಸಾಹೇಬ ಅಂಬೇಡ್ಕರ್‌, ಬುದ್ಧ ತೋರಿಸಿದ ದಾರಿಯಲ್ಲಿ ನಡೆಯುತ್ತಿದ್ದೇವೆ. ಮೊದಲಿನಿಂದಲೂ ಈ ಸತ್ಯದ ದಾರಿಯಲ್ಲಿ ನಡೆದಿದ್ದೇವೆ. ರಾಹುಕಾಲ, ಒಳ್ಳೆಯ ಕಾಲ ಎಂಬುದು ನಮ್ಮ ಭ್ರಮೆ ಅಷ್ಟೇ ಎಂದರು.

ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಈಗಾಗಲೇ ಬಿಡುಗಡೆಗೊಳಿಸಿದ್ದು, 2ನೇ ಪಟ್ಟಿಯನ್ನು ಎ .10ರೊಳಗೆ ಬಿಡುಗಡೆಗೊಳಿಸಲಾಗುವುದು ಎಂದರು.

 


Spread the love

About Laxminews 24x7

Check Also

ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Spread the love ವಿಜಯಪುರ: ದೇಶದಲ್ಲಿ ಪ್ರಜ್ಞಾವಂತ ಮತದಾರರಿದ್ದು, ಲೋಕಸಭೆಗೆ ಯಾರಿಗೆ ಮತ ಹಾಕಬೇಕು, ವಿಧಾನಸಭೆಗೆ ಏನು ನಿರ್ಣಯ ಕೈಗೊಳ್ಳಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ