Breaking News
Home / ರಾಜಕೀಯ / ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ ಅಂಬರೀಶ್ ಎಂಟ್ರಿ?

ರಾಜ್ಯ ರಾಜಕಾರಣಕ್ಕೆ ಸಂಸದೆ ಸುಮಲತಾ ಅಂಬರೀಶ್ ಎಂಟ್ರಿ?

Spread the love

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ಇದೀಗ ಚುನಾವಣೆಯ ಚುಕ್ಕಾಣಿ ಹಿಡಿಯಲು ಬಿಗ್ ಪ್ಲಾನ್ ಮಾಡಿದೆ.

ಹೌದು, ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವ ಉದ್ದೇಶದಿಂದ ಸಂಸದೆ ಸುಮಲತಾ ಅಂಬರೀಶ್ ಅವರನ್ನು ರಾಜ್ಯ ರಾಜಕಾರಣಕ್ಕೆ ಕರೆತರಲು ಸಿದ್ಧತೆ ನಡೆಸಿದೆ.

ಪ್ರಮುಖವಾಗಿ ಜೆಡಿಎಸ್ ಭದ್ರಕೋಟೆ ಎಂದು ಪರಿಗಣಿಸಲಾದ ಮಂಡ್ಯ ಜಿಲ್ಲೆಯನ್ನು ವಶಪಡಿಸಿಕೊಳ್ಳಲು ಬಿಜೆಪಿ ಶತಾಯುಗತಾಯ ಪ್ರಯತ್ನಿಸುತ್ತಿದೆ ಎನ್ನಲಾಗಿದೆ.

ಮಂಡ್ಯ ವಿಧಾನಸಭೆ ಕ್ಷೇತ್ರದಿಂದ ನಟಿ ಹಾಗೂ ರಾಜಕಾರಣಿ ಸುಮಲತಾರನ್ನು ಕಣಕ್ಕಿಳಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಜೊತೆಗೆ ಮಂಡ್ಯದ ಇತರೆ ಕ್ಷೇತ್ರದಲ್ಲಿಯೂ ಸುಮಲತಾ ಅವರನ್ನು ಬಳಸಿಕೊಂಡು ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಮುಂದಾಗಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ ಸುಮಲತಾರಿಗೆ ಬಿಜೆಪಿ ಬೆಂಬಲ ಘೋಷಿಸಿತ್ತು. ಇದೀಗ ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಗೆ ಜಗದೀಶ್​​ ಶೆಟ್ಟರ್‌ ಕೊಡುಗೆ ಏನು? ಲಕ್ಷ್ಮೀ ಹೆಬ್ಬಾಳ್ಕರ್

Spread the love  ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ