Breaking News

ಅನಾಮಧೇಯ ವ್ಯಕ್ತಿಯಿಂದ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ: FIR

Spread the love

ಬೆಂಗಳೂರು: ನಟ ಸುದೀಪ್‌ ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ಚರ್ಚೆಯಲ್ಲಿರುವಾಗಲೇ, ಕಿಚ್ಚ ಸುದೀಪ್‌ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬರಿಂದ ಬೆದರಿಕೆ ಪತ್ರ ಬಂದಿರುವ ಕುರಿತು ಪೊಲೀಸ್‌ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಾಗಿದೆ ಎಂದು ವರದಿಯಾಗಿದೆ.

 

ಕಿಚ್ಚ ಸುದೀಪ್‌ ಬುಧವಾರ ಬಿಜೆಪಿ ಸೇರಿ, ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಪರ – ವಿರೋಧ ಚರ್ಚೆಗಳು ನಡೆಯುತ್ತಿದೆ. ಇದರ ನಡುವೆಯೇ ಕಿಚ್ಚ ಸುದೀಪ್‌ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರವೊಂದು ಬಂದಿದೆ.

 

ಕಿಚ್ಚ ಅವರ ಆಪ್ತ, ನಿರ್ಮಾಪಕ ಜಾಕ್‌ ಮಂಜು ಅವರಿಗೆ ಈ ಪತ್ರ ಸಿಕ್ಕಿದ್ದು, ಇದರಲ್ಲಿ ಕಿಚ್ಚನಿಗೆ ಅನಾಮಧೇಯ ವ್ಯಕ್ತಿ, ಖಾಸಗಿ ವಿಡಿಯೋ ಬಿಡುಗಡೆ ಮಾಡುತ್ತೇನೆ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ಬರೆದು ಬೆದರಿಕೆಯನ್ನು ಹಾಕಿದ್ದಾನೆ ಎನ್ನಲಾಗಿದೆ.

ಈ ಕುರಿತು ಜಾಕ್‌ ಮಂಜು ಅವರು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪತ್ರ ಸಮೇತ ದೂರು ನೀಡಿದ್ದಾರೆ. ಪೊಲೀಸರು ಈ ಬಗ್ಗೆ ಎಫ್‌ ಐ ಆರ್‌ ದಾಖಲಿಸಿಕೊಂಡು ತನಿಖೆ ಆರಂಭಿದ್ದಾರೆ.

ಸದ್ಯ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ