ತಮ್ಮ ಮುಖ ತೋರಿಸಿದರೆ ಮತ ಬರುವುದಿಲ್ಲವೆಂದು ಬೊಮ್ಮಾಯಿ ಚಿತ್ರನಟರ ಮುಂದೆ ಶರಣಾಗಿದ್ದಾರೆ: ಕಾಂಗ್ರೆಸ್​​ ವ್ಯಂಗ್ಯ

Spread the love

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪರ ನಟ ಸುದೀಪ್‌ ಪ್ರಚಾರ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತಾಗಿ ಪರ ಮತ್ತು ವಿರೋಧ ಚರ್ಚೆ ನಡೆಯುತ್ತಿದೆ. ಸುದೀಪ್‌ ಘೋಷಣೆಗೆ ರಾಜ್ಯ ಕಾಂಗ್ರೆಸ್ ‌ವ್ಯಂಗ್ಯವಾಡಿದೆ.

ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ.

ತಮ್ಮ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರನಟರ ಮುಂದೆ ಶರಣಾಗಿದ್ದಾರೆ. ಬಿಜೆಪಿಗೆ ತೋರಿಸಲು ರಾಜಕೀಯ ನಾಯಕರಿಲ್ಲದ ಕಾರಣ ಸಿನೆಮಾ ನಾಯಕರ ಮೊರೆ ಹೋಗಿದೆ. ಮಾಜಿ ಮುಖ್ಯ ಮಂತ್ರಿ ಬಿಎಸ್​​ವೈ ಮುಖವನ್ನು ಮರೆಮಾಚಲು ಮುಂದಾದ ಬಿಜೆಪಿಗೆ ಈಗ ವರ್ಚಸ್ವಿ ನಾಯಕರಿಲ್ಲದಿರುವುದು ದುರಂತ ಎಂದು ಬಿಜೆಪಿ ನಡೆಗೆ ಕಾಂಗ್ರೆಸ್ ವ್ಯಂಗ್ಯವಾಡಿ ಟ್ವೀಟ್​​ ಮಾಡಿದೆ.

 


Spread the love

About Laxminews 24x7

Check Also

ಅಮೇರಿಕಾರದಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ 260 ಕೋಟಿ ಪರಿಹಾರ!

Spread the loveಸಿಯಾಟಲ್: ಅಮೆರಿಕದ ಸಿಯಾಟಲ್‌ನಲ್ಲಿ ವೇಗವಾಗಿ ಬಂದ ಪೊಲೀಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ