ಕಲಬುರಗಿ : ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪುತ್ರ ಡಾ.ಗೋಪಾಲ ಕಾರಜೋಳ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರ ಪುತ್ರನಿಗೆ ಸೋಂಕು ಕಾಣಿಸಿಕೊಂಡಿತ್ತು.
ಬಳಿಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಉಸಿರಾಟದ ತೊಂದರೆಯಾದ ಹಿನ್ನೆಲೆ ಚೆನ್ನೈ ಖಾಸಗಿ ಆಸ್ಪತ್ರೆ ಶಿಪ್ಟ್ ಮಾಡಲಾಗಿದೆ.