Breaking News

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತಾ ಅವರು ಜೆಡಿಎಸ್​​ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ

Spread the love

ಬೆಂಗಳೂರು : ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತಾ ಅವರಿಗೆ ಕೈ ಟಿಕೆಟ್ ತಪ್ಪಿದ ವಿಚಾರವಾಗಿ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾಜಿ ಸಿಎಂ ಹೆಚ್‌.ಡಿ.

ಕುಮಾರಸ್ವಾಮಿ ಮಾತನಾಡಿ, ಮುಂದಿನ ವಿಧಾನ ಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್‌ ಸಿಗುವ ಅಕಾಂಕ್ಷೆಯಿಂದ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತಾ ಅವರು ಜೆಡಿಎಸ್​​ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ ಎಂದು ಹೆಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಕಡೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಇವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಕಡೂರಿನಲ್ಲಿ 2-5 ಚೆಕ್ ತೆಗೆದುಕೊಳ್ಳುವುದಿಲ್ಲ, ಅದಕ್ಕೆ ನಾನು ಬಂದಿಲ್ಲ, ಆ ಚೆಕ್​ಗಳು ಎಷ್ಟು ಮನೆಯಲ್ಲಿ, ಎಲ್ಲೆಲ್ಲಿ ಇವೆಯೋ ಗೊತ್ತಿಲ್ಲ, ಆ ಚೆಕ್-ಹಣ ವಾಪಸ್ ಬರಲ್ಲ ಎಂದು ವ್ಯಂಗ್ಯವಾಡಿದರು.

ದತ್ತಾ ಅವರಿಗೆ ಟಿಕೆಟ್ ಕೊಡಿಸಲು ಸಿದ್ದರಾಮಯ್ಯ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಅವರ ಸಲಹೆಯಂತೆ ದತ್ತಾ ಕೈ ಪಡೆ ಸೇರಿದ್ದರು.ಒಂದೆಡೆ ರೇವಣ್ಣ ಮತ್ತು ಪ್ರಜ್ವಲ್ ಅವರು ದತ್ತಾ ಅವರನ್ನು ಮರಳಿ ಜೆಡಿಎಸ್​ಗೆ ಕರೆತರುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ ಹೀಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತಾ ಅವರಿಗೆ ಕೈ ಟಿಕೆಟ್ ತಪ್ಪಿದ ವಿಚಾರವಾಗಿ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.


Spread the love

About Laxminews 24x7

Check Also

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ

Spread the love ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ 19 ಮತ್ತು 20 ರಂದು ಬೆಳಗಾವಿ ಜಿಲ್ಲೆಗೆ ರೆಡ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ