Breaking News
Home / ಜಿಲ್ಲೆ / ಬೆಂಗಳೂರು / ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತಾ ಅವರು ಜೆಡಿಎಸ್​​ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತಾ ಅವರು ಜೆಡಿಎಸ್​​ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ

Spread the love

ಬೆಂಗಳೂರು : ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತಾ ಅವರಿಗೆ ಕೈ ಟಿಕೆಟ್ ತಪ್ಪಿದ ವಿಚಾರವಾಗಿ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾಜಿ ಸಿಎಂ ಹೆಚ್‌.ಡಿ.

ಕುಮಾರಸ್ವಾಮಿ ಮಾತನಾಡಿ, ಮುಂದಿನ ವಿಧಾನ ಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್‌ ಸಿಗುವ ಅಕಾಂಕ್ಷೆಯಿಂದ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತಾ ಅವರು ಜೆಡಿಎಸ್​​ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ ಎಂದು ಹೆಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಕಡೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಇವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಕಡೂರಿನಲ್ಲಿ 2-5 ಚೆಕ್ ತೆಗೆದುಕೊಳ್ಳುವುದಿಲ್ಲ, ಅದಕ್ಕೆ ನಾನು ಬಂದಿಲ್ಲ, ಆ ಚೆಕ್​ಗಳು ಎಷ್ಟು ಮನೆಯಲ್ಲಿ, ಎಲ್ಲೆಲ್ಲಿ ಇವೆಯೋ ಗೊತ್ತಿಲ್ಲ, ಆ ಚೆಕ್-ಹಣ ವಾಪಸ್ ಬರಲ್ಲ ಎಂದು ವ್ಯಂಗ್ಯವಾಡಿದರು.

ದತ್ತಾ ಅವರಿಗೆ ಟಿಕೆಟ್ ಕೊಡಿಸಲು ಸಿದ್ದರಾಮಯ್ಯ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಅವರ ಸಲಹೆಯಂತೆ ದತ್ತಾ ಕೈ ಪಡೆ ಸೇರಿದ್ದರು.ಒಂದೆಡೆ ರೇವಣ್ಣ ಮತ್ತು ಪ್ರಜ್ವಲ್ ಅವರು ದತ್ತಾ ಅವರನ್ನು ಮರಳಿ ಜೆಡಿಎಸ್​ಗೆ ಕರೆತರುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ ಹೀಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತಾ ಅವರಿಗೆ ಕೈ ಟಿಕೆಟ್ ತಪ್ಪಿದ ವಿಚಾರವಾಗಿ ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ