Breaking News

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ

Spread the love

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಏಪ್ರಿಲ್ 10ರವರೆಗೂ ಮಳೆ ಮುಂದುವರೆಯಲಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ.

ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಲಿಂಗದಾಳ ಗ್ರಾಮದಲ್ಲಿ ಸಿಡಿಲು ಅಪ್ಪಳಿಸಿದೆ. ಈ ವೇಳೆ ಜಮೀನಿನಲ್ಲಿ ಕುರಿಗಳನ್ನು ಕಾಯುತ್ತಿದ್ದ ಇಬ್ಬರು ಯುವಕರು ಸಿಡಿಲುಬಡಿದು ಶಳದಲ್ಲೇ ಸಾವನ್ನಪ್ಪಿದ್ದಾರೆ.

ಶರಣಪ್ಪ ಪುರದ (20) ಹಾಗೂ ದೇವರಾಜ್ ಬಾಡಗಿ (16) ಮೃತರು. ಘಟನೆಯಲ್ಲಿ ನಾಲ್ಕು ಕುರಿ, ಒಂದು ಆಡು ಸಾವನ್ನಪ್ಪಿವೆ.

ಬಾಗಲಕೋಟೆ ಜಿಲ್ಲೆಯಲ್ಲಿಯೂ ಬಿರುಗಾಳಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಬಾದಾಮಿ ಆಲೂಕಿನ ಜಾಲಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು, ಮನೆ ಮೇಲ್ಛಾವಣಿ ಕುಸಿದು ಬಿದ್ದಿದೆ. ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ.

ಯಂಕುಬಾಯಿ ಕುಲ್ಕರ್ಣಿ(29), ಶಾರದಾ ಪತ್ತಾರ (61) ಮೃತರು.. ಕೊಪ್ಪಳ, ರಾಯಚೂರು, ಧಾರವಾಡ ಬೆಂಗಳೂರ್ರ್ ಗ್ರಾಮಾಂತರ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದೆ. ಇನ್ನೂ ಕೆಲದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Spread the love

About Laxminews 24x7

Check Also

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Spread the loveಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ  ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ