ಧಾರವಾಡ : ಕರ್ನಾಟಕ ವಿಧಾನಸಭೆಗೆ ಭಾರತ ಚುನಾವಣಾ ಆಯೋಗವು ಮಾರ್ಚ್ 29 ರಂದು ಸಾರ್ವತ್ರಿಕ ಚುನಾವಣೆಯನ್ನು ಘೋಷಣೆ ಮಾಡಿದೆ. ಅದರಂತೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 20 (ಗುರುವಾರ) ಆಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಅರ್ಹ ಮತದಾರರು, ಮತದಾರರ ಯಾದಿಯಲ್ಲಿ ಹೆಸರುಗಳ ಸೇರ್ಪಡೆಯಾಗಿರುವ ಬಗ್ಗೆ https://ceo.karnataka.gov.in, https://www.nvsp.in ವೆಬ್ಸೈಟ್ಗಳಲ್ಲಿ ಹಾಗೂ Voter Helpline ಆಪ್ನಲ್ಲಿ ಮತ್ತು ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ. ಒಂದು ವೇಳೆ ಮತದಾರರ ಯಾದಿಯಲ್ಲಿ ಅರ್ಹ ಮತದಾರರ ಹೆಸರುಗಳು ಸೇರ್ಪಡೆಯಾಗದೇ ಇದ್ದಲ್ಲಿ, ಅಂಥಹ ಅರ್ಹ ಮತದಾರರು ದಿನಾಂಕ:10.04.2023 ರೊಳಗೆ https://www.nvsp.in ವೆಬ್ಸೈಟ್ನಲ್ಲಿ ಅಥವಾ Voter Helpline ಆಪ್ನಲ್ಲಿ ನಮೂನೆ-6 ರಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.
ಏಪ್ರಿಲ್ 10 ರ ನಂತರ ನಮೂನೆ-6 ರಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ಈ ಚುನಾವಣೆ ಮುಗಿದ ನಂತರ ಮತದಾರರ ಯಾದಿಯಲ್ಲಿ ಸೇರ್ಪಡೆ ಮಾಡಿಕೊಳ್ಳಲು ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.