Breaking News

ಚೆನ್ನೈ-ದೆಹಲಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಹೊಗೆ: ಪ್ರಯಾಣಿಕರು ಗಾಬರಿ

Spread the love

ಮರಾವತಿ (ಆಂಧ್ರಪ್ರದೇಶ): ‌ಚೆನ್ನೈ-ದೆಹಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಗಾಬರಿ ಮೂಡಿಸಿದ ಪ್ರಸಂಗ ನೆಲ್ಲೂರಿನಲ್ಲಿ ಭಾನುವಾರ ನಡೆದಿದೆ.

ಜನರ ಈ ಗಾಬರಿಗೆ ಇತ್ತೀಚೆಗೆ ಕೇರಳದ ರೈಲು ಬೋಗಿಗೆ ಬೆಂಕಿಯಿಟ್ಟ ದುರ್ಘಟನೆಯೇ ಕಾರಣ ಎಂದು ನಂಬಲಾಗಿದೆ.

 

ಪ್ರಯಾಣದ ವೇಳೆ ಚೆನ್ನೈ-ದೆಹಲಿ ಎಕ್ಸ್‌ಪ್ರೆಸ್‌ನ B-5ನೇ ಬೋಗಿಯಲ್ಲಿ ಹೊಗೆ ಎದ್ದಿರುವುದು ಕಂಡುಬಂತು. ಈ ಸಂದರ್ಭ ಆಗಬಹುದಾದ ದುರಂತ ತಪ್ಪಿಸುವ ಎಚ್ಚರಿಕೆಯಿಂದ ಚಾಲಕರು ರೈಲನ್ನು 20 ನಿಮಿಷಗಳ ಕಾಲ ಕಾವಾಲಿ ನಿಲ್ದಾಣದ ಸಮೀಪ ನಿಲ್ಲಿಸಿದರು.

ನಂತರ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಈ ವೇಳೆ ರೈಲು ಬೋಗಿಯ ಬ್ರೇಕ್ ಜಾಮ್‌ನಿಂದ ಹೊಗೆ ಉಂಟಾಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.

ದುರಸ್ತಿ ನಂತರ ರೈಲು ತನ್ನ ಪ್ರಯಾಣವನ್ನು ಮುಂದುವರೆಸಿತು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ