Breaking News
Home / ರಾಜಕೀಯ / ಗೋವಾದಲ್ಲಿ ಹುಲಿಗಳ ಸಂಖ್ಯೆ ಇಳಿಮುಖ; ಕಾರಣವೇನು..?

ಗೋವಾದಲ್ಲಿ ಹುಲಿಗಳ ಸಂಖ್ಯೆ ಇಳಿಮುಖ; ಕಾರಣವೇನು..?

Spread the love

ಣಜಿ: ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ದೇಶದಲ್ಲಿ ಹುಲಿ ಗಣತಿ ಘೋಷಿಸಿದರು. 2022 ರ ಹುಲಿ ಗಣತಿ ವರದಿಯ ಪ್ರಕಾರ, ಭಾರತದಲ್ಲಿನ ಹುಲಿಗಳ ಸಂಖ್ಯೆ 3,167 ಕ್ಕೆ ಏರಿದೆ.

ದೇಶದಲ್ಲಿ ಹುಲಿಗಳ ಸಂಖ್ಯೆಯ ಪರಿಸ್ಥಿತಿ ಉತ್ತಮವಾಗಿದ್ದರೂ ಗೋವಾದಲ್ಲಿ ಹುಲಿಗಳ ಸಂಖ್ಯೆ ಇಳಿಮುಖವಾಗಿದ್ದು,ಇಲ್ಲಿನ ಮಹದಾಯಿ ಮತ್ತು ಮೋಲೆಮ್ ಅಭಯಾರಣ್ಯಗಳಲ್ಲಿ ಹುಲಿಗಳ ಸಂಖ್ಯೆ ಇಳಿಮುಖವಾಗಿದೆ.

 

ಕಳೆದ ಕೆಲ ವರ್ಷಗಳ ಹಿಂದೆ ಗೋವಾದಲ್ಲಿ ಹುಲಿಗಳ ಇರುವಿಕೆಯನ್ನು ದೃಢಪಡಿಸಲು ಅಭಯಾರಣ್ಯಗಳಲ್ಲಿ ಕ್ಯಾಮರಾಗಳನ್ನು ಅಳವಡಿಸಿ ಹುಲಿಗಳ ಇರುವಿಕೆಯನ್ನು ಅರಣ್ಯ ಇಲಾಖೆ ದೃಢಪಡಿಸಿತ್ತು.

ಆದರೆ ಕಳೆದ ವರ್ಷ ಗೋವಾದ ಅಭಯಾರಣ್ಯದಲ್ಲಿ ಮೂರು ಹುಲಿಗಳ ಮೃತದೇಹ ಪತ್ತೆಯಾಗಿತ್ತು. ಇದರಿಂದಾಗಿ ಗೋವಾದಲ್ಲಿ ಹುಲಿಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿರುವ ಬಗ್ಗೆ ಆತಂಕ ಹೆಚ್ಚುವಂತಾಗಿದೆ.

ಗೋವಾ-ಕರ್ನಾಟಕ ಗಡಿಭಾಗದ ಪಶ್ಚಿಮ ಘಟ್ಟಗಳಲ್ಲಿ ಹುಲಿಗಳ ಸಂಖ್ಯೆ ಇಳಿಮುಖವಾಗಿದೆ. ರಾಜ್ಯಾದ್ಯಂತ ಯಾವುದೇ ಅಂಕಿ-ಅಂಶಗಳು ಇನ್ನೂ ಬಿಡುಗಡೆಯಾಗದಿದ್ದರೂ, ಪಶ್ಚಿಮ ಘಟ್ಟಗಳ ಈ ಭಾಗದಲ್ಲಿ ಹುಲಿಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಹೇಳಲಾಗುತ್ತಿದೆ.

ಅರಣ್ಯನಾಶ, ಅರಣ್ಯಗಳಲ್ಲಿ ಹೆಚ್ಚುತ್ತಿರುವ ಮಾನವ ಹಸ್ತಕ್ಷೇಪ ಮತ್ತು ಅಭಿವೃದ್ಧಿ ಪ್ರಕ್ರಿಯೆಗಳು ಇದರ ಹಿಂದಿನ ಕಾರಣಗಳು. ಇತ್ತೀಚಿನ ಮಾಹಿತಿಯ ಪ್ರಕಾರ, ಪಶ್ಚಿಮ ಘಟ್ಟಗಳ ಕೆಲ ಭಾಗಗಳನ್ನು ಹೊರತುಪಡಿಸಿ ಹುಲಿಗಳ ಆವಾಸಸ್ಥಾನವು ಕ್ಷೀಣಿಸುತ್ತಿದೆ. ದಾಂಡೇಲಿಯಲ್ಲಿ ಹುಲಿ ಚಟುವಟಿಕೆ ಹೆಚ್ಚಿದ್ದರೂ ಗಡಿ ಭಾಗದಲ್ಲಿ ಹುಲಿಗಳ ಹಾವಳಿ ಕಡಿಮೆಯಾಗಿದೆ.

ಹುಲಿ ಗಣತಿಗಾಗಿ, ಭಾರತದಲ್ಲಿನ ಆವಾಸಸ್ಥಾನಗಳನ್ನು ಐದು ಭಾಗಗಳಾಗಿ ವಿಂಗಡಿಸಲಾಗಿದೆ. ಶಿವಾಲಿಕ್-ಗಂಗಾ ಬಯಲು, ಮಧ್ಯ ಭಾರತ ಮತ್ತು ಪೂರ್ವ ಘಟ್ಟಗಳು, ಪಶ್ಚಿಮ ಘಟ್ಟಗಳು, ಈಶಾನ್ಯ ಬೆಟ್ಟಗಳು ಮತ್ತು ಬ್ರಹ್ಮಪುತ್ರ ನದಿಯ ಕಣಿವೆಗಳು ಮತ್ತು ಸುಂದರಬನ್ಸ್ ಹೀಗೆ ಐದು ಭಾಗಗಳಾಗಿ ವಿಂಗಡಿಸಲಾಗಿದೆ.

ಪಶ್ಚಿಮ ಘಟ್ಟಗಳು ಅತ್ಯಧಿಕ ಜೀವವೈವಿಧ್ಯತೆಯನ್ನು ಹೊಂದಿವೆ. ಆದಾಗ್ಯೂ, ಇತ್ತೀಚಿನ ದಿನಗಳಲ್ಲಿ, ಅಭಿವೃದ್ಧಿಯ ಪ್ರಕ್ರಿಯೆಯು ವನ್ಯಜೀವಿಗಳು ಮತ್ತು ಮಾನವರ ನಡುವೆ ಹೆಚ್ಚುತ್ತಿರುವ ಸಂಘರ್ಷಗಳಿಗೆ ಕಾರಣವಾಗಿದೆ.

2018 ರ ಹೊತ್ತಿಗೆ, ಹುಲಿಗಳ ಸಂಖ್ಯೆ 981 ಆಗಿತ್ತು. ಆದರೆ 2022 ರಲ್ಲಿ ಇದು 824ಕ್ಕೆ ಇಳಿಕೆಯಾಗಿದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಶಿಫಾರಸುಗಳ ಹೊರತಾಗಿಯೂ ಸಂರಕ್ಷಿತ ಪ್ರದೇಶದಲ್ಲಿ ಗೋವಾ ಇನ್ನೂ ಹುಲಿ ಯೋಜನೆಯನ್ನು ಅಭಿವೃದ್ಧಿಪಡಿಸಿಲ್ಲ.

ಗೋವಾದ ಮೊಲೆಮ್-ಮಹದಾಯಿಯಲ್ಲಿ ಹುಲಿ ಯೋಜನೆಗೆ ಶಿಫಾರಸು ಮಾಡಿದ್ದರೂ ಇನ್ನೂ ಜಾರಿಗೆ ಬಂದಿಲ್ಲ. ಹುಲಿ ಯೋಜನೆ ಇನ್ನೂ ಕಾಗದದಲ್ಲಿಯೇ ಉಳಿದುಕೊಂಡಿರುವಂತಾಗಿದೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ