Breaking News

ಮಾರಿಕಾಂಬಾ ದೇವಾಲಯದಲ್ಲಿ ಬಿ ಫಾರಂ ಅರ್ಪಿಸಿ ಪೂಜೆ ಸಲ್ಲಿಸಿದ

Spread the love

ಶಿರಸಿ: ಮಾಜಿ ‌ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಎಲ್ಲ ವಿಧಾನ ಸಭಾ ಕ್ಷೇತ್ರದ ಬಿ ಫಾರಂಗಳನ್ನು ಮಾರಿಕಾಂಬಾ ದೇವಾಲಯದಲ್ಲಿ ಪೂಜೆ‌ ಮಾಡಿಸಿದ ಘಟನೆ ಬುಧವಾರ ನಡೆಯಿತು.

ಬುಧವಾರ ನಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಜೆಡಿಎಸ್ ರ‍್ಯಾಲಿಗೆ ಚಾಲನೆ ಕೊಡುವ ಮೊದಲು ದೇವಿ ದರ್ಶನ ಪಡೆದು ಬಿ ಫಾರಂ ಪೂಜೆ ಸಲ್ಲಿಸಿದರು‌.

 

ಬಳಿಕ ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು. ಜೆಡಿಎಸ್ ಕಾರ್ಯಕರ್ತರು 50 ಅಡಿಗೂ ಎತ್ತರದ ಅನಾನಸ್ ಹಾರವನ್ನು ಕ್ರೇನ್ ಮೂಲಕ ಮಾಜಿ ಸಿಎಂಗೆ ಹಾಕಿಸಿದರು.

ಇದಕ್ಕೂ‌ ಮೊದಲು ಹೆಲಿಪ್ಯಾಡ್ ನಲ್ಲಿ ಬಂದಿಳಿದ ಕುಮಾರಸ್ವಾಮಿ ‌ಅವರ ನೋಡಲು ಬಂದ ಪ್ರಮುಖರ ಜೇಬಿಗೆ ಚೋರನೋರ್ವ ಕತ್ತರಿ ಹಾಕಿ ಪೊಲೀಸರ ಅತಿಥಿಯಾದ ಘಟನೆ ಕೂಡ ನಡೆಯಿತು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ