Breaking News

ಅನಿಲ ಬೆನಕೆ ಕೋರಿಕೆಯನ್ನು ತಿರಸ್ಕರಿಸಿದ ಕಾಂಗ್ರೆಸ್

Spread the love

ಬೆಳಗಾವಿ: ಟಿಕೆಟ್ ವಂಚಿತರಾಗಿರುವ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ ಬೆನಕೆ ಸೇರ್ಪಡೆಗೆ ಕಾಂಗ್ರೆಸ್ ನೋ ಎಂದಿದೆ.

 ದೊರಕಿರುವ ಮಾಹಿತಿ ಪ್ರಕಾರ ಬಿಜೆಪಿ ಟಿಕೆಟ್ ತಪ್ಪುತ್ತಿದ್ದಂತೆ ಅನಿಲ ಬೆನಕೆ ಕಾಂಗ್ರೆಸ್ ನಾಯಕರನ್ನು ಸಂಪರ್ಕಿಸಿದ್ದಾರೆ. ಉತ್ತರದ ಟಿಕೆಟ್ ನೀಡುವಂತೆ ಕೋರಿದ್ದಾರೆ. ಆದರೆ ಅಲ್ಪಸಂಖ್ಯಾತರಿಗೆಂದು ಪಕ್ಷ ಮೀಸಲಿಟ್ಟಿರುವ ಬೆಳಗಾವಿ ಉತ್ತರ ಕ್ಷೇತ್ರದ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

 

 

ಬೆಳಗಾವಿ ಜಿಲ್ಲೆಯ 18ರಲ್ಲಿ ಒಂದು ಕ್ಷೇತ್ರವನ್ನು ಅಲ್ಪಸಂಖ್ಯಾತರಿಗೆ ಕೊಡಲೇಬೇಕಾಗಿದೆ. ಇದು ಪಕ್ಷದ ಬದ್ಧತೆ. ಹಾಗಾಗಿ ಅದನ್ನು ತಪ್ಪಿಸಿ ಕೊಡಲು ಅವಕಾಶವಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟವಾಗಿ ಅನಿಲ ಬೆನಕೆ ಕೋರಿಕೆಯನ್ನು ತಿರಸ್ಕರಿಸಿದೆ ಎಂದು ಗೊತ್ತಾಗಿದೆ.


Spread the love

About Laxminews 24x7

Check Also

ಬೆಂಗಳೂರಲ್ಲಿ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

Spread the loveಬೆಂಗಳೂರು: ಇಲ್ಲಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ