Breaking News

ಧರ್ಮೇಂದ್ರ ಪ್ರಧಾನ್ ರಿಂದ ಶಮನ ಆಗತ್ತಾ ಬೆಳಗಾವಿಬಿಜೆಪಿ ಬಂಡಾಯ?

Spread the love

ಬೆಳಗಾವಿ: ಟಿಕೆಟ್ ಘೋಷಣೆಯ ನಂತರ ಬೆಳಗಾವಿ ಬಿಜೆಪಿಯಲ್ಲಿ ಬುಗಿಲೆದ್ದಿರುವ ಬಂಡಾಯ ಶಮನ ಮಾಡಲು ಕರ್ನಾಟಕ ಚುನಾವಣೆ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಶನಿವಾರ ಬೆಳಗಾವಿಗೆ ಆಗಮಿಸುತ್ತಿದ್ದಾರೆ.

ಬೆಳಗಾವಿಯ 7 ಕ್ಷೇತ್ರಗಳಲ್ಲಿ ತೀವ್ರ ಬಂಡಾಯ ಕಾಣಿಸಿದೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಈಗಾಗಲೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿಯಾಗಿದೆ. ಮಾಜಿ ಸಚಿವ ಶಶಿಕಾಂತ ನಾಯಕ ಕೂಡ ಕಾಂಗ್ರೆಸ್ ಸೇರಿದ್ದಾರೆ. ಶಾಸಕ ಅನಿಲ ಬೆನಕೆ ಕಾಂಗ್ರೆಸ್ ಸೇರಲು ಯತ್ನಿಸಿದ್ದು, ಸಫಲವಾಗಲಿಲ್ಲ. ಪಕ್ಷೇತರರಾಗಿ ಕಣಕ್ಕಿಳಿಯುವ ಸ್ಧ್ಯತೆ ಇದೆ.

ರಾಮದುರ್ಗದ ಶಾಸಕ ಮಹಾದೇವಪ್ಪ ಯಾದವಾಡ ಪಕ್ಷೇತರರಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ. ಅಲ್ಲಿ ಇನ್ನೂ 6 ಜನರು ಅಸಮಾಧಾನಗೊಂಡಿದ್ದಾರೆ. ಖಾನಾಪುರದಲ್ಲಿ ಅರವಿಂದ ಪಾಟೀಲ ಮತ್ತು ಡಾ.ಸೋನಾಲಿ ಸರ್ನೋಬತ್ ಅಸಮಾಧಾನ ಹೊರಹಾಕಿದ್ದಾರೆ. ಬೆಳಗಾವಿ ಗ್ರಾಮೀಣದಲ್ಲಿ ಪದಾಧಿಕಾರಿಗಳು ಸಿಡಿದೆದ್ದಿದ್ದಾರೆ


Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ