ಬೆಂಗಳೂರು : ದೇವನಹಳ್ಳಿ ಕ್ಷೇತ್ರದ ಕಾಂಗ್ರೆಸ್ ನ ಮಾಜಿ ಶಾಸಕ ವೆಂಕಟಸ್ವಾಮಿ (53) ಅವರು ತೀವ್ರ ಹೃದಯಾಘಾತದಿಂದ ತಡರಾತ್ರಿ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಾಂಗ್ರೆಸ್ ನ ಮಾಜಿ ಶಾಸಕ ವೆಂಕಟಸ್ವಾಮಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧರನಾಗಿದ್ದಾರೆ.
ವೆಂಕಟಸ್ವಾಮಿಗೆ ಕಳೆದ 1 ತಿಂಗಳಲ್ಲಿ ಮೂರು ಬಾರಿ ಎದೆನೋವು ಕಾಣಿಸಿಕೊಂಡಿತ್ತು. ಎರಡು ಬಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರಗೊಂಡಿದ್ದ ಮಾಜಿ ಶಾಸಕ ವೆಂಕಟಸ್ವಾಮಿಗೆ ಕಳೆದ 2 ದಿನಗಳ ಹಿಂದೆಯೂ ಹೃದಯಾಘಾತವಾಗಿತ್ತು. ಆದರೆ ತಡರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇಂದು ಸಾದರಹಳ್ಳಿಯಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.