Breaking News

ರಾಷ್ಟ್ರೀಯ ನಾಯಕರ 20 ದಿನಗಳ ಪ್ರವಾಸದ ರೂಪುರೇಷೆ

Spread the love

ಬೆಂಗಳೂರು: “ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರವಾಸಗಳ ಕುರಿತು ಚರ್ಚೆ ಮಾಡಿದ್ದೇವೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಪಕ್ಷದ ಕಚೇರಿಯಲ್ಲಿ ನಡೆದ ಚುನಾವಣಾ ‌ನಿರ್ವಹಣಾ ಸಮಿತಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.
“ರಾಷ್ಟ್ರೀಯ ನಾಯಕರ ಚುನಾವಣಾ ಪ್ರವಾಸಗಳ ಕುರಿತು ಸಭೆ ನಡೆಸಿದ್ದೇವೆ. ಮುಂದಿನ 20 ದಿನಗಳ ರೂಪುರೇಷೆ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು.

ಎಲ್ಲ ಅಭ್ಯರ್ಥಿಗಳ ಜೊತೆ ಸಂಪರ್ಕ ಇಟ್ಟುಕೊಂಡಿದ್ದೇವೆ. ಅಭ್ಯರ್ಥಿಗಳ 3ನೇ ಪಟ್ಟಿ ಶೀಘ್ರ ಬಿಡುಗಡೆ ಆಗುತ್ತದೆ ಎಂದರು.
ಶನಿವಾರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸದಲ್ಲಿ ಸಭೆ ನಡೆಯುವ ವಿಚಾರದ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಜಗದೀಶ್ ಶೆಟ್ಟರ್ ಸಭೆ ಎಲ್ಲವೂ ಗೊತ್ತಿದೆ” ಎಂದರಲ್ಲದೇ “ನನ್ನ ಹೆಣ ಕೂಡಾ ಬಿಜೆಪಿ ಕಚೇರಿ ಕಡೆ ಹೋಗಲ್ಲ” ಎಂಬ ಲಕ್ಷ್ಮಣ ಸವದಿ ಹೇಳಿಕೆ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ “ಸವದಿ ಸ್ವಲ್ಪ ಭಾವುಕರಾಗಿದ್ದಾರೆ” ಎಂದು ಹೇಳಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ