Breaking News

ಬೆಳಗಾವಿ ಗ್ರಾಮೀಣ ,ಅಥಣಿ ಕಾಗವಾಡ ಎಲ್ಲಾಕಡೆ ಬಿಜೆಪಿ ಪಕ್ಷದ ಬಾವುಟ ಹಾರಿಸುತ್ತವೆ: ರಮೇಶ್ ಜಾರಕಿಹೊಳಿ

Spread the love

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಇಂದು ಎಲ್ಲ ಬಿಜೆಪಿ ಕಾರ್ಯ ಕರ್ತರ ಸಮ್ಮಿಲನ ವಾಗಿ ಒಂದು ಕಾರ್ಯಕ್ರಮ ನಡೆಯಿತು.

ಅಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರು ಹಾಗೂ ಬಿಜೆಪಿಯ ಪ್ರಮುಖರಾದ ಎಲ್ಲರೂ ಭಾಗ ವಹಿಸಿದ್ದರು.
ಹಾಗೂ ಟಿಕೆಟ್ ವಂಚಿತರಾದ ಧನಂಜಯ ಜಾಧವ ಹಾಗೂ ಸಂಜಯ್ ಪಾಟೀಲ ಕೂಡ ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಗೆಲ್ಲಿಸುದುವು ನಮ್ಮ ಗುರಿ ಯಾಗಿರಲಿ ಗ್ರಾಮೀಣ ಭಾಗದಲ್ಲಿ ಪ್ರಮುಖ ರಾದ ಧನಂಜಯ್ ಜಾಧವ, ಹಾಗೂ ಸಂಜಯ್ ಪಾಟೀಲ ಅವರು ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಕೂಡ ಹೇಳಿದರು ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಇನ್ನು ರಾಜ್ಯದಲ್ಲಿ ಹಿರಿಯ ನಾಯಕರು ರಾಜೀನಾಮೆ ಕೊಡುತ್ತಿದ್ದಾರೆ ಅದಕ್ಕೆ ಹೆದರುವ ಅವಶ್ಯಕತೆ ಇಲ್ಲ ನಾವು ಎಲ್ಲರೂ ಒಟ್ಟಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಕಾಂಗ್ರೆಸನ್ನು ಕಿತ್ತೊಗೆಯುವ ಕಾರ್ಯ ಮಾಡಬೇಕಾಗಿದೆ ಎಂದರು.
ನಾನು ಅಥಣಿ ಹಾಗೂ ಕಾಗವಾಡ ಎರಡು ಕ್ಷೇತ್ರದ ಕಡೆ ಹೆಚ್ಚಿನ ಗಮನ ಹರಿಸಲು ಹೊರಟಿದ್ದೇನೆ ನೀವಿಬ್ಬರೂ ಇಲ್ಲಿ ಹೆಚ್ಚಿನ ಜವಾಬ್ದಾರಿಯಿಂದ ಸಂಘಟನೆ ಮಾಡಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಆರಿಸಿ ತರಬೇಕು ಎಂದರು ರಮೇಶ್ ಜಾರಕಿಹೊಳಿ


Spread the love

About Laxminews 24x7

Check Also

ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆ: ಡಿಜಿಟಲ್ ಅರೆಸ್ಟ್​​ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್

Spread the loveಮಂಗಳೂರು: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ಎಂದು ಖದೀಮರು ಅಮಾಯಕರನ್ನು ವಂಚಿಸಿ ಕೋಟಿಗಟ್ಟಲೆ ಹಣ ವಂಚಿಸುತ್ತಿರುವುದು ಬೆಳಕಿಗೆ ಬರುತ್ತಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ