Breaking News

ಒಬ್ಬಅಭ್ಯರ್ಥಿ; ಎರಡು ಪಕ್ಷಗಳಿಂದ ನಾಮಪತ್ರ ಸಲ್ಲಿಕೆ!

Spread the love

ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ರಾಜಕೀಯ ಡ್ರಾಮಾ, ಹೈಡ್ರಾಮಾಗಳ ವೇದಿಕೆ ಸೃಷ್ಟಿಸಿದೆ. ಪ್ರಮುಖ ಪಕ್ಷಗಳಲ್ಲಿ ಟಿಕೆಟ್ ಗಾಗಿ ಅತೃಪ್ತಿ, ಅಸಮಾಧಾನ, ಎದುರಾಳಿ ಪಕ್ಷಕ್ಕೆ ಜಿಗಿತ, ಹಳೆಯ ಪಕ್ಷಕ್ಕೆ ಉಗಿತ.. ಹೀಗೆ ಒಂದಲ್ಲ ಒಂದು ಸೀನ್ ರಂಜನೀಯವಾಗಿ ಮೂಡಿಬರುತ್ತಿವೆ.

ಇಂಥ ಸನ್ನಿವೇಶದಲ್ಲಿ ಒಬ್ಬರೇ ವ್ಯಕ್ತಿ ಎರಡು ಪಕ್ಷಗಳಿಂದ ನಾಮಪತ್ರ ಸಲ್ಲಿಸಿ ಗಮನ ಸೆಳೆದಿದ್ದಾರೆ. ಅವರು ಮೈಸೂರಿನ ಅಯೂಬ್ ಖಾನ್. ಇತ್ತೀಚೆಗೆ ಮೇಲ್ಮನೆಗೆ ನಡೆದ ಚುನಾವಣೆಯಲ್ಲಿ ಮೈಸೂರಿನಿಂದ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದಲೂ ಸ್ಪರ್ಧೆ ಬಯಸಿದ್ದ ಅವರು ತಮ್ಮದೇ ಆದ ‘ಇಂಡಿಯನ್‌ ನ್ಯಾಷನಲ್‌ ನ್ಯೂ ಕಾಂಗ್ರೆಸ್‌’ ಎಂಬ ರಾಷ್ಟ್ರೀಯ ಪಕ್ಷ ಹುಟ್ಟು ಹಾಕಿ ಅದರ ರಾಷ್ಟ್ರೀಯ ಅಧ್ಯಕ್ಷರೂ ಆಗಿದ್ದರು. 

ಇತ್ತೀಚೆಗೆ ತಮ್ಮ ಪಕ್ಷಕ್ಕೆ ತಾವೇ ರಾಜೀನಾಮೆ ನೀಡುವ ಮೂಲಕ ಅಚ್ಚರಿದಾಯಕ ಬೆಳವಣಿಗೆಯೊಂದಕ್ಕೂ ಕಾರಣರಾಗಿದ್ದರು. ಈ ಬಾರಿಯ ವಿಧಾನಸಭೆ ಚುನಾವಣೆಗೆ ನರಸಿಂಹರಾಜ ಕ್ಷೇತ್ರದಿಂದ ಬಿ ಫಾರ್ಮ್ ಸಿಗುವ ಮೊದಲೇ ಜೆಡಿಎಸ್ ಅಭ್ಯರ್ಥಿ ಎಂದು ನಾಮಪತ್ರ ಸಲ್ಲಿಸಿದ್ದರು.


Spread the love

About Laxminews 24x7

Check Also

ಬೆಂಗಳೂರಲ್ಲಿ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

Spread the loveಬೆಂಗಳೂರು: ಇಲ್ಲಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ