Breaking News

ರಾಜಕೀಯ ವ್ಯವಸಾಯ ಇದ್ದಂತೆ, ಉತ್ತಮ ಬೆಳೆಗೆ ಕಾಯಬೇಕು ಅಷ್ಟೇ: ಡಿ.ಕೆ.ಶಿವಕುಮಾರ್​

Spread the love

ನಕಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಸೋಮವಾರ ಕನಕಪುರ ವಿಧಾನಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಕೆಂಕೇರಮ್ಮ ದೇವಸ್ಥಾನದಲ್ಲಿ ಕುಟುಂಬಸ್ಥರು ಹಾಗೂ ಮುಖಂಡರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ್​ ನಂತರ ಬೃಹತ್​ ಬೈಕ್​ ರ್‍ಯಾಲಿ ಹಾಗೂ ರೋಡ್​ಶೋ ನಡೆಸಿದರು.

ಈ ವೇಳೆ ಅಪಾರ ಜನಸ್ತೋಮದ ನಡುವೆ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು.

ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಡಿಕೆಶಿ ರಾಜಕಾರಣ ಅನ್ನೋದು ವ್ಯವಸಾಯ ಇದ್ದಂತೆ ವ್ಯವಸಾಯದಲ್ಲಿ ಹೇಗೆ ಬಿತ್ತನೆ ಹಾಕಿ, ನೀರು ಹಾಕಿ, ಪೋಷಣೆ ಮಾಡಿ ಬೆಳೆ ತಗೀತ್ತಾರೋ ಹಾಗೇ ಬೆಳೆ ಕಟಾವು ಮಾಡುವ ಸಮಯ ಚುನಾವಣೆಯಲ್ಲಿ ಬಂದಿದೆ.

 

ನಾನು 35 ವರ್ಷಗಳ ಕಾಲ ವ್ಯವಸಾಯದಂದತೆ ರಾಜಕಾರಣದಲ್ಲಿ ನೂರಾರು ನಾಯಕರನ್ನು ಬೆಳೆಸಿದ್ದೇನೆ. ಕನಕಪುರದಲ್ಲಿ ಅವ್ರೇ ನನ್ನ ಚುನಾವಣೆ ಯನ್ನು ಮಾಡುತ್ತಾರೆ ಎಂದು ತಿಳಿಸಿದ್ಧಾರೆ.

ಅಂತಿಮವಾಗಿ ಒಳ್ಳೆಯ ಬೆಳೆ, ಬೆಳೆಗೆ ಉತ್ತಮವಾದ ಬೆಲೆಯನ್ನು ಮೇ 10ರಂದು ನಡೆಯುವ ಚುನಾವಣೆಯಲ್ಲಿ ಜನರು ಕೊಡ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ