Breaking News

ಜನರು ಕೊಟ್ಟ ದೇಣಿಗೆಯೇ ಮುತಾಲಿಕ್ ಅವರ ಆದಾಯದ ಮೂಲ

Spread the love

ಡುಪಿ: ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್‌ ನಾಮಪತ್ರ ಸಲ್ಲಿಸಿದರು.

ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಆಸ್ತಿ ವಿವರದ ಪ್ರಕಾರ ಪ್ರಮೋದ ಮುತಾಲಿಕ್ ಕೈಯಲ್ಲಿ ₹10,500 ನಗದು, ಖಾತೆಯಲ್ಲಿ ₹3,000 ಹಾಗೂ ಅಂಚೆ ಇಲಾಖೆಯ ಎನ್‌ಎಸ್‌ಸಿ ಬಾಂಡ್‌ನಲ್ಲಿ ₹2.50 ಲಕ್ಷ ಠೇವಣಿ ಸೇರಿ ₹2.63 ಲಕ್ಷ ಹಣ ಹೊಂದಿದ್ದಾರೆ.

ಇದರ ಹೊರತಾಗಿ ಯಾವುದೇ ಆಸ್ತಿ, ‌ಸ್ವಂತ ವಾಹನ ಇಲ್ಲ. ಹಾಗೆಯೇ ಸಾಲವನ್ನೂ ಮಾಡಿಲ್ಲ. ಅವಿವಾಹಿತರಾಗಿರುವ ಮುತಾಲಿಕ್‌ ಅವರು, ಜನರು ಕೊಟ್ಟ ದೇಣಿಗೆಯೇ ಆದಾಯದ ಮೂಲ ಎಂದು ತಿಳಿಸಿದ್ದಾರೆ.

ಪ್ರಕರಣಗಳು: ಪ್ರಮೋದ ಮುತಾಲಿಕ್ ಮೇಲೆ ಯಾದಗರಿ ನಗರ, ಶೃಂಗೇರಿ, ಬೆಂಗಳೂರು ಹೈಗ್ರೌಂಡ್ ಠಾಣೆ, ಬಬಲೇಶ್ವರ, ನವನಗರ, ಜೇವರ್ಗಿ, ಮುರುಡೇಶ್ವರ ಠಾಣೆಗಳಲ್ಲಿ ಒಟ್ಟು 7 ಅಪರಾಧ ಪ್ರಕರಣಗಳು ಇವೆ.

ಪ್ರಚೋದನಾಕಾರಿ ಭಾಷಣ, ಶಸ್ತ್ರಾಸ್ತ್ರ ಕಾಯ್ದೆ ಉಲ್ಲಂಘನೆ, ಮಾನನಷ್ಟ ಮೊಕದ್ದಮೆ, ಜೀವ ಬೆದರಿಕೆ, ಧಾರ್ಮಿಕ ಭಾವನೆಗೆ ಧಕ್ಕೆ, ಅವಾಚ್ಯ ಶಬ್ದಗಳಿಂದ ನಿಂದನೆ, ಕೋಮುಗಲಭೆಯ ಆರೋಪಗಳು ಸಹ ಮುತಾಲಿಕ್ ಮೇಲಿವೆ.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ