Breaking News

ಲಂಚ ಪಡೆಯುತ್ತಿದ್ದ ಆರೋಗ್ಯ ಅಧೀಕ್ಷಕನ ಬಂಧನ

Spread the love

ಚೆನ್ನೈ: ನರ್ಸಿಂಗ್ ವಿದ್ಯಾರ್ಥಿಗಳನ್ನು ತರಬೇತಿಗೆ ಕಳುಹಿಸಲು ಲಂಚ ಪಡೆದಿದ್ದ ಆರೋಗ್ಯ ಅಧೀಕ್ಷಕರೊಬ್ಬರನ್ನು ಬಂಧಿಸಲಾಗಿದೆ.

ತಮಿಳುನಾಡಿನ ವೆಲ್ಲೂರಿನಲ್ಲಿ ಈ ಘಟನೆ ನಡೆದಿದೆ. ವಿಜಿಲೆನ್ಸ್‌ ಗೆ ಬಂದ ನರ್ಸಿಂಗ್ ಸಂಸ್ಥೆಯೊಂದರ ದೂರು ಆಧರಿಸಿ ಜಿಲ್ಲಾ ಆರೋಗ್ಯ ಅಧೀಕ್ಷಕ ಕೃಷ್ಣಮೂರ್ತಿ ಅವರನ್ನು ಬಂಧಿಸಲಾಗಿದೆ.

ಎಲ್ಲ ನರ್ಸಿಂಗ್ ಸಂಸ್ಥೆಗಳಲ್ಲಿ ಮೂರು ತಿಂಗಳ ಆಸ್ಪತ್ರೆಯಲ್ಲಿ ತರಬೇತಿ ಕಡ್ಡಾಯವಾಗಿದ್ದು ಇದಕ್ಕೆ ಜಿಲ್ಲಾ ಆರೋಗ್ಯ ಅಧೀಕ್ಷಕರು ಅನುಮತಿ ನೀಡಬೇಕು. ಈ ಅನುಮತಿ ನೀಡಲು ಕೃಷ್ಣಮೂರ್ತಿ ಲಂಚ ಕೇಳಿದ್ದ ಬಗ್ಗೆ ವೆಲ್ಲೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಪಿಆರ್ ನರ್ಸಿಂಗ್ ಸಂಸ್ಥೆಯ ಪ್ರಾಚಾರ್ಯೆ ಶರಣ್ಯ ಅವರು ವಿಜಿಲೆನ್ಸ್‌ ಗೆ ದೂರು ಸಲ್ಲಿಸಿದ್ದರು.

ಕೃಷ್ಣಮೂರ್ತಿ ನರ್ಸಿಂಗ್ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು ಲಂಚದ ಹಣವನ್ನೂ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ತನಿಖೆ ಮುಂದುವರಿದಿದೆ.


Spread the love

About Laxminews 24x7

Check Also

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ