Breaking News

ಹೊಸ ಸುತ್ತೋಲೆ ಹೊರಡಿಸಿದ KSRTC : ʼರಾಂಗ್​ ಸೈಡ್​​ನಲ್ಲಿ ಬರುವ ಬಸ್ಸಿನಿಂದಲೇ ಅಪಘಾತ ಹೆಚ್ಚಳʼ

Spread the love

ಬೆಂಗಳೂರು : ರಾಜ್ಯಾದ್ಯಂತ ಸಂಚರಿಸೋ ಕೆಎಸ್‌ಆರ್‌ಟಿಸಿ ಬಸ್ಸಿನಿಂದಲೇ ಅಪಘಾತ ಪ್ರಕರಣ ಹೆಚ್ಚಾಗಿದ್ದು, ಈ ಬೆನ್ನಲ್ಲೆ ನಿಯಮಗಳನ್ನು ಬಿಗಿಗೊಳಿಸಲು ಹೊಸ ಸುತ್ತೋಲೆ ಹೊರಡಿಸಿದೆ ಎಂದು ವರದಿಯಾಗಿದೆ.

ದೇಶದಲ್ಲೇ ಅತ್ಯುತ್ತಮ ಸಂಪರ್ಕ ಸಾರಿಗೆ ಎಂಬ ಹೆಗ್ಗಲಿಕೆಗೆ ಕೆಎಸ್‌ಆರ್‌ಟಿಸಿ ಬಸ್‌ ಪಾತ್ರವಾಗಿದ್ದು, ಅಪಘಾತಗಳು ಹೆಚ್ಚಾಗುತ್ತಿರೋದ್ರಿಂದ ಚಾಲಕರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕು, ಅಪ್ಪಿತಪ್ಪಿ ಉಲ್ಲಂಘಿಸಿದರೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೊಸ ಸುತ್ತೋಲೆ ಮೂಲಕ ಖಡಕ್‌ ವಾರ್ನಿಂಗ್‌ ನನ್ನು ಹೊರಡಿಸಲಾಗಿದೆ.

ಅದರಲ್ಲೂ ಇತ್ತೀಚಿಗೆ ಉದ್ಘಾಟನೆಗೊಂಡ ಬೆಂಗಳೂರು-ಮೈಸೂರು ಚತುಷ್ಪತ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚಾರ ನಡೆಸುತ್ತಿದ್ದು, ಅಲ್ಲದೇ ಜನರು ತಪ್ಪಾದ ಲೈನ್​ನಲ್ಲಿ ಇಳಿಸುತ್ತಿದ್ದಾರೆ ಇದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿರೋದ್ರಿಂದ ಈಗಾಗಲೇ ನಿಮಗಕ್ಕೆ ಖಾಸಗಿ ವಾಹನ ಸವಾರರು ನಿಗಮಕ್ಕೆ ದೂರು ನೀಡಿದ್ದಾರೆ.

ಈ ಕಾರಣದಿಂದಾಗಿ ಹೊಸ ಸುತ್ತೋಲೆ ಹೊರಡಿಸಿ, ಚಾಲಕರ ನಿಯಮಗಳನ್ನು ಕಠಿಣಗೊಳಿಸಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ