Breaking News

ಖರ್ಗೆ ತವರಿನಲ್ಲಿಯೇ ಕಾ0ಗ್ರೆಸ್​ ಪಕ್ಷವನ್ನು ಕಟ್ಟಿ ಹಾಕಿ ಕೇಸರಿ ಪತಾಕಿ ಹಾರಿಸಲು ಬಿಜೆಪಿ ರಣತಂತ್ರ

Spread the love

ಕಲಬುರಗಿ: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ತವರಿನಲ್ಲಿಯೇ ಕಾ0ಗ್ರೆಸ್​ ಪಕ್ಷವನ್ನು ಕಟ್ಟಿ ಹಾಕಿ ಕೇಸರಿ ಪತಾಕಿ ಹಾರಿಸಲು ಬಿಜೆಪಿ ರಣತಂತ್ರ ರೂಪಿಸಿದೆ.

ಖುದ್ದು ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಇಂದು ಕಲಬುರಗಿಗೆ ಎಂಟ್ರಿ ಕೊಡುವ ಮೂಲಕ ಗೆಲುವಿನ ರಣತಂತ್ರ ರೂಪಿಸಲು ಮುಂದಾಗಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವ ಗುರಿಯಲ್ಲಿ ಯಶಸ್ವಿಯಾದ ಕಮಲ ಪಕ್ಷದ ನಾಯಕರು ಈ ಬಾರಿ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನು ಟಾರ್ಗೆಟ್​ ಮಾಡಿದ್ದಾರೆ. ಇದರ ಜೊತೆಗೆ ಜಿಲ್ಲೆಯ 9 ಕ್ಷೇತ್ರಗಳನ್ನು ತಮ್ಮ ಮಡಿಲಿಗೆ ಹಾಕಿಕೊಳ್ಳುವ ಯೋಜನೆ ರೂಪಿಸುತ್ತಿದ್ದಾರೆ‌. ಈ ಮೂಲಕ ತವರಿನಲ್ಲಿಯೇ ಖರ್ಗೆ ಅವರನ್ನು ಕಟ್ಟಿಹಾಕುವ ಕೆಲಸಕ್ಕೆ‌ ಕೇಸರಿ ಪಡೆಯ ನಾಯಕರು ಮುಂದಾಗಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ