ಕಲಬುರಗಿ: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ತವರಿನಲ್ಲಿಯೇ ಕಾ0ಗ್ರೆಸ್ ಪಕ್ಷವನ್ನು ಕಟ್ಟಿ ಹಾಕಿ ಕೇಸರಿ ಪತಾಕಿ ಹಾರಿಸಲು ಬಿಜೆಪಿ ರಣತಂತ್ರ ರೂಪಿಸಿದೆ.
ಖುದ್ದು ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಇಂದು ಕಲಬುರಗಿಗೆ ಎಂಟ್ರಿ ಕೊಡುವ ಮೂಲಕ ಗೆಲುವಿನ ರಣತಂತ್ರ ರೂಪಿಸಲು ಮುಂದಾಗಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವ ಗುರಿಯಲ್ಲಿ ಯಶಸ್ವಿಯಾದ ಕಮಲ ಪಕ್ಷದ ನಾಯಕರು ಈ ಬಾರಿ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನು ಟಾರ್ಗೆಟ್ ಮಾಡಿದ್ದಾರೆ. ಇದರ ಜೊತೆಗೆ ಜಿಲ್ಲೆಯ 9 ಕ್ಷೇತ್ರಗಳನ್ನು ತಮ್ಮ ಮಡಿಲಿಗೆ ಹಾಕಿಕೊಳ್ಳುವ ಯೋಜನೆ ರೂಪಿಸುತ್ತಿದ್ದಾರೆ. ಈ ಮೂಲಕ ತವರಿನಲ್ಲಿಯೇ ಖರ್ಗೆ ಅವರನ್ನು ಕಟ್ಟಿಹಾಕುವ ಕೆಲಸಕ್ಕೆ ಕೇಸರಿ ಪಡೆಯ ನಾಯಕರು ಮುಂದಾಗಿದ್ದಾರೆ.