ಮಂಗಳೂರು: ಬಿಜೆಪಿಯ ಅಭಿವೃದ್ಧಿ ಓಟಕ್ಕೆ ಜನತೆ ಜತೆಗೂಡಿದ್ದು ಈ ಬಾರಿ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಪ್ರಚಾರದಲ್ಲಿ ಮಂಗಳ ವಾರ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಭ್ರಷ್ಟಾ ಚಾರವಿಲ್ಲದೆ ಜನಪರ ಆಡಳಿತ ನೀಡಿದ ಬಿಜೆಪಿ ಸರಕಾರದ ಪರ ಮತದಾರ ಒಲವು ತೋರಿಸು ತ್ತಿದ್ದಾರೆ.
ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಜನರೇ ಮುನ್ನುಡಿ ಬರೆಯಲಿದ್ದಾರೆ ಎಂದರು. ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ ಕಾಮತ್ ಸೇರಿದಂತೆ ಪಕ್ಷದ ಸ್ಥಳೀಯ ನಾಯಕರು ಜತೆಗಿದ್ದರು.