Breaking News
Home / ರಾಜಕೀಯ / ಮಹಾಲಕ್ಷ್ಮಿ ದೇವಸ್ಥಾನದ ಪ್ರವೇಶಿಸುವ ಮೊದಲು ನಾನಿನ್ನು ಕೈ ತೊಳೆದಿಲ್ಲ ದೇವಸ್ಥಾನದ ಒಳಗೆ ಬರಬಹುದೇ ಎಂದ ರಾಹುಲ್ ಗಾಂಧಿ

ಮಹಾಲಕ್ಷ್ಮಿ ದೇವಸ್ಥಾನದ ಪ್ರವೇಶಿಸುವ ಮೊದಲು ನಾನಿನ್ನು ಕೈ ತೊಳೆದಿಲ್ಲ ದೇವಸ್ಥಾನದ ಒಳಗೆ ಬರಬಹುದೇ ಎಂದ ರಾಹುಲ್ ಗಾಂಧಿ

Spread the love

ರಾಹುಲ್ ಗಾಂಧಿ ಮಹಾಲಕ್ಷ್ಮಿ ದೇವಸ್ಥಾನದ ಒಳಗೆ ಪ್ರವೇಶಿಸುವ ಮೊದಲು ನಾನಿನ್ನು ಕೈ ತೊಳೆದಿಲ್ಲ ದೇವಸ್ಥಾನದ ಒಳಗೆ ಬರಬಹುದೇ ಎಂದು ಪ್ರಶ್ನಿಸಿದ್ದಾರೆ. ಉಡುಪಿ: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಉಡುಪಿ ಭೇಟಿಯ ವೇಳೆ ಅಚ್ಚರಿಯ ಘಟನೆ ಒಂದು ನಡೆಯಿತು.

ಕಾಪು ತಾಲೂಕಿನ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಸಂವಾದ ನಡೆಸಿದ ರಾಹುಲ್ ಗಾಂಧಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ದೊಡ್ಡ ಗಾತ್ರದ ಅಂಜಲ್ ಮೀನೊಂದನ್ನು ಗಿಫ್ಟಾಗಿ ಕೊಟ್ಟಿತು. ಈ ಮೀನನ್ನು ಎತ್ತಿ ಖುಷಿ ಪಟ್ಟ ರಾಹುಲ್ ಮೀನುಗಾರ ಮಹಿಳೆಯ ಜೊತೆ ಆತ್ಮೀಯವಾಗಿ ನಿಂತು ಫೋಟೋಗೆ ಪೋಸ್ ಕೊಟ್ಟರು.

ಇದಾಗಿ ನೇರಾ ಮಹಾಲಕ್ಷ್ಮಿ ದೇಗುಲಕ್ಕೆ ರಾಹುಲ್ ಗಾಂಧಿಯನ್ನು ಕರೆತರಲಾಯ್ತು. ಮೀನನ್ನು ಕೈಯಲ್ಲಿ ಹಿಡಿದಿದ್ದ ರಾಹುಲ್ ನಾನಿನ್ನು ಕೈ ತೊಳೆದಿಲ್ಲ ದೇವಸ್ಥಾನದ ಒಳಗೆ ಬರಬಹುದೇ ಎಂದು ಮುಗ್ಧವಾಗಿ ಪ್ರಶ್ನೆ ಮಾಡಿದ್ದಾರೆ. ಸುತ್ತಮುತ್ತ ಇದ್ದ ಕಾಂಗ್ರೆಸ್ ನಾಯಕರು ಮೊಗವೀರ ಮುಖಂಡರು ಯಾವುದೇ ಅಭ್ಯಂತರ ಇಲ್ಲ ತಾವು ಒಳಗೆ ಬನ್ನಿ ಎಂದಿದ್ದಾರೆ.

ಆದರೂ ರಾಹುಲ್ ಗಾಂಧಿ ಹೊಸ್ತಿಲ ಹೊರಗೆ ನಿಂತು ಆಲೋಚನೆ ಮಾಡಿದ್ದಾರೆ ನಂತರ ಜೊತೆಗಿದ್ದವರು ದೇಗುಲದ ಒಳಗೆ ಕರೆದುಕೊಂಡು ಹೋಗಿದ್ದಾರೆ. ವಿಶೇಷ ಪೂಜೆ ಸಲ್ಲಿಕೆ ಮಾಡಿದ ಅರ್ಚಕರು ರಾಹುಲ್ ಗಾಂಧಿ ಅವರಿಗೆ ಆಯುಷ್ಯ ಆರೋಗ್ಯ ಭಾಗ್ಯ ಕರುಣಿಸಲಿ. ಸತ್ಯ ನ್ಯಾಯ ನೀತಿ ಧರ್ಮದ ಮೂಲಕ ದೇಶ ರಕ್ಷಣೆ ಮಾಡುವ ಶಕ್ತಿ ಸಾಮರ್ಥ್ಯ ನಿಮ್ಮಲ್ಲಿ ಇದೆ. ಭಾರತ ಜೋಡೋ ಎಂಬ ದೊಡ್ಡ ಕಾರ್ಯಕ್ರಮವನ್ನು ತಾವು ಮಾಡಿದ್ದೀರಿ ಎಂದು ಅರ್ಚಕರು ದೇವರ ಮುಂದೆ ಪ್ರಾರ್ಥಿಸಿ, ಪ್ರಸಾದವನ್ನು ನೀಡಿದ್ದಾರೆ.

 


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ