Breaking News
Home / ಜಿಲ್ಲೆ / ಕಲಬುರ್ಗಿ / ಸಿಎಂ ಬೊಮ್ಮಾಯಿ ಭರ್ಜರಿ ಪ್ರಚಾರ: ಅಭ್ಯರ್ಥಿಗಳ ಪರ ಮತಬೇಟೆ

ಸಿಎಂ ಬೊಮ್ಮಾಯಿ ಭರ್ಜರಿ ಪ್ರಚಾರ: ಅಭ್ಯರ್ಥಿಗಳ ಪರ ಮತಬೇಟೆ

Spread the love

ಲಬುರಗಿ ಹಾಗೂ ಯಾದಗಿರಿಯಲ್ಲಿ ಸಿಎಂ ಬೊಮ್ಮಾಯಿ ಶುಕ್ರವಾರ ಅದ್ಧೂರಿ ರೋಡ್ ಶೋ ನಡೆಸಿದರು. ಅಭ್ಯರ್ಥಿಗಳಾದ ತೆಲ್ಕೂರ ಹಾಗೂ ಅಮೀನರೆಡ್ಡಿ ಪರವಾಗಿ ಮತಯಾಚನೆ ಮಾಡಿದರು.ಕಲಬುರಗಿ/ಯಾದಗಿರಿ: ‘ಮೋದಿ ಎಂದರೆ ವಿಷವನ್ನು ನುಂಗಿ ಇಡೀ ದೇಶದ ಹಿತ ಬಯಸುವ ನೀಲಕಂಠನಿದ್ದಂತೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. ಶುಕ್ರವಾರ ಸೇಡಂ ಪಟ್ಟಣದಲ್ಲಿ ಅಭ್ಯರ್ಥಿ ರಾಜಕುಮಾರ್​ ಪಾಟೀಲ್ ತೆಲ್ಕೂರ ಪರವಾಗಿ ಬೃಹತ್ ರೋಡ್ ಶೋ ಮೂಲಕ ಮತಯಾಚಿಸಿದರು. ಈ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು.

“ಪ್ರಧಾನಿ ಮೋದಿ ವಿಷದ ಹಾವು ಎಂದು ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು. ಖರ್ಗೆಯವರಿಗೆ ಇದು ಶೋಭೆ ತರುವುದಿಲ್ಲ. ಅವರಿಗೆ ಮೋದಿ ಅಂದ್ರೆ ಭಯ, ಮೋದಿ ನೇತೃತ್ವದಲ್ಲಿ ಎಲ್ಲೆಲ್ಲಿ ಚುನಾವಣೆಯಾಗಿದೆ ಅಲ್ಲಲ್ಲಿ ಕಾಂಗ್ರೆಸ್​ ಪಕ್ಷ ನಿರ್ಣಾಮವಾಗಿದೆ. ಹೀಗಾಗಿ ಮೋದಿ ಹೆಸರು ಕೇಳಿದರೆ ಅವರಿಗೆ ನಿದ್ದೆ ಬರುವುದಿಲ್ಲ. ಈಗ ಕರ್ನಾಟಕದಲ್ಲಿ ಚುನಾವಣೆ ನಡೆಯುತ್ತಿದೆ. ಪ್ರಧಾನಿ ಆಗಮನದಿಂದ ಕಾಂಗ್ರೆಸ್ ಮುಕ್ತ ಕರ್ನಾಟಕವಾಗಲಿದೆ” ಎಂದರು.

ದೀನ ದಲಿತರಗೆ ಗೌರವ: “ಕಾಂಗ್ರೆಸ್‍ನ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲ ಮೀಸಲಾತಿ ಪಡೆದುಕೊಂಡವರು ಭಿಕ್ಷೆ ಬೇಡುವವರು ಎಂದು ಹೇಳಿಕೆ ನೀಡಿದ್ದಾರೆ. ಲಿಂಗಾಯತರು, ದೀನ ದಲಿತರು, ಹಿಂದುಳಿದವರು ಮೀಸಲಾತಿಯನ್ನು ಪಡೆದಿದ್ದಾರೆ. ಹಾಗದರೆ ಅವರು ಭಿಕ್ಷುಕರೇ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು. ಚುನಾವಣೆಗಾಗಿ ಬಂದಾಗ ಮಾತ್ರ ದಲಿತರು ಇವರಿಗೆ ನೆನಪಾಗುತ್ತಾರೆ. 30 ವರ್ಷಗಳಿಂದ ಒಳ ಮೀಸಲಾತಿ ಮಾಡಲು ಮನಸ್ಸು ಮಾಡಲಿಲ್ಲ. ಆದರೆ ನಾನು ಬಂದ ಮೇಲೆ ಒಳಮೀಸಲಾತಿಯನ್ನು ಜಾರಿಗೆ ತರುವುದರ ಮೂಲಕ ದೀನ ದಲಿತರಗೆ ಗೌರವವನ್ನು ಕೊಟ್ಟಿದ್ದೇನೆ” ಎಂದು ತಿಳಿಸಿದರು.

ರೋಡ್ ಶೋನಲ್ಲಿ ತೆಲ್ಕೂರ ಅವರಿಗೆ ಬೆಂಬಲ ನೀಡಲು ಜನರು ಬಂದಿರುವುದನ್ನು ನೋಡಿದರೆ ನನಗೆ ತುಂಬಾ ಸಂತೋಷವಾಗುತ್ತಿದೆ. ಮೇ 10 ರಂದು ತೆಲ್ಕೂರ ಅವರಿಗೆ ಮತ್ತೊಮ್ಮೆ ಹೆಚ್ಚಿನ ಮತ ನೀಡುವ ಮೂಲಕ ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಿ ನವ ಕರ್ನಾಟಕ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಸಿಎಂ ಮನವಿ ಮಾಡಿದರು.

ವಿಧಾನಸಭೆ ಚುನಾವಣೆಯಲ್ಲಿ ಹಾಲಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ ಅವರು ಮತ್ತೊಮ್ಮೆ 30 ಸಾವಿರಕ್ಕೂ ಹೆಚ್ಚು ದಾಖಲೆ ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿ ಸೇಡಂನ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ. ಸೇಡಂ ಕ್ಷೇತ್ರದಲ್ಲಿ ಸುಮಾರು 15 ವರ್ಷಗಳು ಶಾಸಕರಾಗಿ, ಸಚಿವರಾಗಿ ಆಡಳಿತ ನಡೆಸಿದ ಶರಣ ಪ್ರಕಾಶ ಪಾಟೀಲರು ಮಾಡದ ಅಭಿವೃದ್ಧಿಯನ್ನು ಕೇವಲ 5 ವರ್ಷಗಳಲ್ಲಿ ತೆಲ್ಕೂರ ಶಾಸಕರಾಗಿದ್ದುಕೊಂಡು ಮಾಡಿದ್ದಾರೆ. ಅಷ್ಟೇ ಅಲ್ಲದೇ ಈ ಭಾಗದ ರೈತರಿಗಾಗಿ ಶಾಶ್ವತವಾಗಿ ಉಪಯೋಗವಾಗುವ ಕಾಗಿಣಾ ಯೋತ ನೀರಾವರಿ ಯೋಜನೆಯನ್ನು ಬೆನ್ನು ಬಿಡದೆ ಜಾರಿಗೊಳಿಸಿ ‘ಆಧುನಿಕ ಭಗೀರಥ’ ಏನಿಸಿಕೊಂಡಿದ್ದಾರೆ ಎಂದು ತೆಲ್ಕೂರ ಅವರನ್ನು ಸಿಎಂ ಹಾಡಿ ಹೊಗಳಿದರು.


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ