Breaking News

ಮುಧೋಳದಲ್ಲಿ ದಾಖಲೆ ಇಲ್ಲದ 5 ಕೋಟಿ ಹಣ ಜಪ್ತಿ

Spread the love

ಬಾಗಲಕೋಟೆ : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ತಡೆಗೆ ಚುನಾವಣೆ ಆಯೋಗದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದರೂ ಹಲವೆಡೆ ಇದುವರೆಗೂ ನೂರಾರು ಕೋಟಿ ಹಣ ಜಪ್ತಿ ಮಾಡಿಕೊಳ್ಳಲಾಗಿದೆ.

ಅಂತೆಯೇ ಜಿಲ್ಲೆಯ ಮುಧೋಳ ಮತಕ್ಷೇತ್ರದ ಲಕ್ಷಾನಟ್ಟಿ ಚೆಕ್​ಪೋಸ್ಟ್​ ಬಳಿ ಅಧಿಕಾರಿಗಳು ಶನಿವಾರ ವಾಹನದಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ 5 ಕೋಟಿ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ.

ಹುಬ್ಬಳ್ಳಿಯಿಂದ ಮುಧೋಳಕ್ಕೆ ತೆರಳುತ್ತಿದ್ದ ವಾಹನವನ್ನು ಎಸ್​ಎಸ್​ಟಿ ತಂಡ ಪರಿಶೀಲನೆ ನಡೆಸಿದಾಗ ವಾಹನದಲ್ಲಿದ್ದ ವ್ಯಕ್ತಿಯು ಹಣವು ಯುನಿಯನ್ ಬ್ಯಾಂಕ್​ಗೆ ಸೇರಿದೆ ಎಂದಿದ್ದಾನೆ. ಆದರೆ ವ್ಯಕ್ತಿಯ ಹೆಸರು, ಹುದ್ದೆ ಹಾಗೂ ಚಾಲಕ, ಬ್ಯಾಂಕ್ ಟ್ಯಾಗ್ಸ್ ಹಾಗೂ ಬ್ಯಾಂಕ್ ಕೋಡ್​​ ಸೇರಿದಂತೆ ಇತರೆ ದಾಖಲೆಗಳು ಕಂಡುಬಾರದ ಕಾರಣ ಹಣವನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಶಕ್ಕೆ ಪಡೆದ ನಗದನ್ನು ಖಜಾನೆಗೆ ಜಮೆ‌ ಮಾಡಲಾಗಿದೆ ಎಂದು ಚುನಾವಣೆ ಅಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪಿ ಸುನೀಲ ಕುಮಾರ ಮಾಹಿತಿ ನೀಡಿದ್ದಾರೆ.

 ಮುಧೋಳದಲ್ಲಿ ದಾಖಲೆ ಇಲ್ಲದ 5 ಕೋಟಿ ಹಣ ಜಪ್ತಿರಾಜ್ಯಾದ್ಯಂತ ಈಗಾಗಲೇ ಚುನಾವಣೆ ಅಕ್ರಮ ಸಂಬಂಧ ಬರೋಬ್ಬರಿ 302.78 ಕೋಟಿ ರೂಪಾಯಿ ಅಕ್ರಮ ನಗದು, ಮದ್ಯ, ಉಡುಗೊರೆ ಚುನಾವಣಾ ಆಯೋಗದ ವಿವಿಧ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಶನಿವಾರ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಕಳೆದ ಬಾರಿಯ ಚುನಾವಣೆಗೆ ಹೋಲಿಸಿದರೆ ಹೆಚ್ಚುವರಿ ಸುಮಾರು ಶೇಕಡಾ 68ಕ್ಕೂ ಅಧಿಕ ಮೊತ್ತದ ಹಣ ಜಪ್ತಿ ಆಗಿದೆ.


Spread the love

About Laxminews 24x7

Check Also

ಬೆಳಗಾವಿ ತಾಲೂಕಿನ ಯಳ್ಳೂರಿನಲ್ಲಿ ಶ್ರೀ ಸ್ವಾಮಿ ಸಮರ್ಥರ ನೂತನ ಸೇವಾ ಕೇಂದ್ರದ ಪ್ರಾರಂಭ

Spread the love ಬೆಳಗಾವಿ ತಾಲೂಕಿನ ಯಳ್ಳೂರಿನಲ್ಲಿ ಶ್ರೀ ಸ್ವಾಮಿ ಸಮರ್ಥರ ನೂತನ ಸೇವಾ ಕೇಂದ್ರದ ಪ್ರಾರಂಭ ಶ್ರೀ ಸ್ವಾಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ