Breaking News

ಮೂರು ವರ್ಷದ ಬಾಲಕ 1 ರೂಪಾಯಿ ಸಿಹಿ ತಿನಿಸಿಗೆ ಬಲಿ.!

Spread the love

ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಮಕ್ಕಳ ಸಿಹಿ ತಿನಿಸು ಇರುವ ಹೆಬ್ಬೆರೆಳು ಗಾತ್ರದ ಗಾಜಿನ ಬಾಟಲಿಯು ಗಂಟಲಲ್ಲಿ‌ ಸಿಲುಕಿಕೊಂಡು ಮೂರು ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ.

ಪಟ್ಟಣದ 8 ನೇ ವಾರ್ಡಿನ ಮದೀನಾ ಗಲ್ಲಿಯ ಮಹ್ಮದ್ ಅಹ್ಮದ್ ರಬ್ಬಾನಿ ಬಾಗೇವಾಡಿ ಸಾವನ್ನಪ್ಪಿದ ಮಗು ಎಂದು ತಿಳಿದು ಬಂದಿದೆ.

ಬಾಲಕ ಮಹ್ಮದ್ 1 ಅಂಗಡಿಯಲ್ಲಿ ಸಿಹಿ ತಿನಿಸಿದ್ದ ಬಾಟಲಿ ಕೊಂಡುಕೊಂಡಿದ್ದಾನೆ. ಅದರ ಮುಚ್ಚಳವನ್ನು ಬಾಯಿಂದ ತೆಗೆಯಲು ಯತ್ನಿಸಿದ ಸಂದರ್ಭದಲ್ಲಿ ಬಾಟಲಿಯು ಗಂಟಲಿನ ಅನ್ನನಾಳದಲ್ಲಿ ಅಡ್ಡ ಸಿಲುಕಿ ಅಸ್ವಸ್ಥಗೊಂಡಿದ್ದ ಎನ್ನಲಾಗಿದೆ.

ಈ ವಿಷಯ ಪಾಲಕರ ಗಮನಕ್ಕೆ ಬರುತ್ತಿದ್ದಂತೆ ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಪಟ್ಟರೂ ಸಹ ಮಾರ್ಗ ಮಧ್ಯೆ ಬಾಲಕ ಸಾವನ್ನಪ್ಪಿದ್ದಾನೆ.

Spread the love

About Laxminews 24x7

Check Also

ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ

Spread the love ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ