Breaking News

ಮೂರು ವರ್ಷದ ಬಾಲಕ 1 ರೂಪಾಯಿ ಸಿಹಿ ತಿನಿಸಿಗೆ ಬಲಿ.!

Spread the love

ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಮಕ್ಕಳ ಸಿಹಿ ತಿನಿಸು ಇರುವ ಹೆಬ್ಬೆರೆಳು ಗಾತ್ರದ ಗಾಜಿನ ಬಾಟಲಿಯು ಗಂಟಲಲ್ಲಿ‌ ಸಿಲುಕಿಕೊಂಡು ಮೂರು ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ.

ಪಟ್ಟಣದ 8 ನೇ ವಾರ್ಡಿನ ಮದೀನಾ ಗಲ್ಲಿಯ ಮಹ್ಮದ್ ಅಹ್ಮದ್ ರಬ್ಬಾನಿ ಬಾಗೇವಾಡಿ ಸಾವನ್ನಪ್ಪಿದ ಮಗು ಎಂದು ತಿಳಿದು ಬಂದಿದೆ.

ಬಾಲಕ ಮಹ್ಮದ್ 1 ಅಂಗಡಿಯಲ್ಲಿ ಸಿಹಿ ತಿನಿಸಿದ್ದ ಬಾಟಲಿ ಕೊಂಡುಕೊಂಡಿದ್ದಾನೆ. ಅದರ ಮುಚ್ಚಳವನ್ನು ಬಾಯಿಂದ ತೆಗೆಯಲು ಯತ್ನಿಸಿದ ಸಂದರ್ಭದಲ್ಲಿ ಬಾಟಲಿಯು ಗಂಟಲಿನ ಅನ್ನನಾಳದಲ್ಲಿ ಅಡ್ಡ ಸಿಲುಕಿ ಅಸ್ವಸ್ಥಗೊಂಡಿದ್ದ ಎನ್ನಲಾಗಿದೆ.

ಈ ವಿಷಯ ಪಾಲಕರ ಗಮನಕ್ಕೆ ಬರುತ್ತಿದ್ದಂತೆ ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಪಟ್ಟರೂ ಸಹ ಮಾರ್ಗ ಮಧ್ಯೆ ಬಾಲಕ ಸಾವನ್ನಪ್ಪಿದ್ದಾನೆ.

Spread the love

About Laxminews 24x7

Check Also

ಬೆಣ್ಣೆನಗರಿಗೆ ಬರಲಿದೆ ಐಟಿ ಪಾರ್ಕ್

Spread the loveದಾವಣಗೆರೆ: ಬೆಣ್ಣೆನಗರಿ ದಾವಣಗೆರೆ ಮಧ್ಯ ಕರ್ನಾಟಕದ ಕೇಂದ್ರ ಬಿಂದು. ಪ್ರಗತಿಯತ್ತ ಸಾಗುತ್ತಿರುವ ದಾವಣಗೆರೆಯಲ್ಲಿ ಐಟಿಬಿಟಿ ಕಂಪನಿಗಳು ಕರೆತರಲು ಇಲ್ಲಿಲ್ಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ