Breaking News

ರಾತ್ರಿ ಪಾನಮತ್ತಳಾಗಿ ಓಲಾಡುತ್ತಯುವಕನ ಇರಿದು ಕೊಲೆಗೈದ ಯುವತಿ

Spread the love

ಬೆಳಗಾವಿ: ರಾತ್ರಿ ಪಾನಮತ್ತಳಾಗಿ ಓಲಾಡುತ್ತ ಚಾಕು ಹಿಡಿದು ರಸ್ತೆಯಲ್ಲಿ ಹೊರಟಿದ್ದ ಯುವತಿಯೊಬ್ಬಳು ಯುವಕನೊಬ್ಬನಿಗೆ ಇರಿದು ಕೊಲೆಗೈದಿದ್ದಾಳೆ.

ನಗರದ ಹಳೆ ಪಿಬಿ ರಸ್ತೆಯಲ್ಲಿ ರಾತ್ರಿ 2 ಗಂಟೆಗೆ ಈ ಘಟನೆ ನಡೆದಿದೆ. ನಾಗರಾಜ ಭೀಮಸಿ ಪಾಟೀಲ (28) ಕೊಲೆಯಾದ ಯುವಕ.

ಕೈಯ್ಯಲ್ಲಿ ಚಾಕು ಹಿಡಿದುಕೊಂಡು ಮಹಿಳೆ ಕುಡಿದ ಮತ್ತಿನಲ್ಲಿ ಓಲಾಡುತ್ತ ರಸ್ತೆಯಲ್ಲಿ ಸಾಗುತ್ತಿದ್ದಳು. ಈ ವೇಳೆ ಬೈಕ್ ನಲ್ಲಿ ಸಾಗುತ್ತಿದ್ದ ನಾಗರಾಜ ಆಕೆಯನ್ನು ವಿಚಾರಿಸಿದಾಗ ಕೆರಳಿದ ಯುವತಿ ಮಾತಿಗೆ ಮಾತು ಬೆಳೆಸಿ ಯುವಕನಿಗೆ ಚೂರಿಯಿಂದ ಇರಿದಿದ್ದಾಳೆ.

ಕೂಡಲೆ ನಾಗರಾಜ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ.

ಈ ಸಂಬಂಧ ಪೊಲೀಸರು ಕಂಗ್ರಾಳಿ ಕೆ.ಎಚ್. ಗ್ರಾಮದ ಜಯಶ್ರೀ ಪವಾರ ಎಂಬ ಯುವತಿಯನ್ನು ಬಂಧಿಸಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ