Breaking News
Home / ಹುಬ್ಬಳ್ಳಿ / ಬಿಜೆಪಿ  ನಾಯಕರು ಕಚ್ಚಾಡಿಕೊಂಡು ಸರ್ಕಾರ ಬಿದ್ರೆ, ನಾವು ಚುನಾವಣೆ ಎದುರಿಸಲು ಸಿದ್ದರಿದ್ದೇವೆ: ಸಿದ್ದರಾಮಯ್ಯ

ಬಿಜೆಪಿ  ನಾಯಕರು ಕಚ್ಚಾಡಿಕೊಂಡು ಸರ್ಕಾರ ಬಿದ್ರೆ, ನಾವು ಚುನಾವಣೆ ಎದುರಿಸಲು ಸಿದ್ದರಿದ್ದೇವೆ: ಸಿದ್ದರಾಮಯ್ಯ

Spread the love

ಹುಬ್ಬಳ್ಳಿ: ಬಿಜೆಪಿ  ನಾಯಕರು ಕಚ್ಚಾಡಿಕೊಂಡು ಸರ್ಕಾರ ಬಿದ್ರೆ, ನಾವು ಚುನಾವಣೆ ಎದುರಿಸಲು ಸಿದ್ದರಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,  ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆಯ ಅಭ್ಯರ್ಥಿಯನ್ನು ಒಂದು ವರ್ಷದ ಮೊದಲ ಆಯ್ಕೆ ಮಾಡಿದ್ದೇವೆ. ಈ ಮೊದಲು ಪದವೀಧರರ ಚುನಾವಣೆಯನ್ನ ನಾವು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ಆದರೆ ಈ ಬಾರಿ ಚುನಾವಣೆಗಳನ್ನ ಕಾಂಗ್ರೆಸ್ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದರು.

ಕರ್ನಾಟಕದ ಎರಡು ಪದವೀಧರರ ಕ್ಷೇತ್ರಕ್ಕೆ ಚುನಾವಣೆ ನಡೀತಿದೆ. ಪಶ್ಚಿಮ ಕ್ಷೇತ್ರದಿಂದ ಡಾ. ಕುಬೇರಪ್ಪ ಅವರನ್ನ ಘೋಷಣೆ ಮಾಡಿದ್ದೇವೆ. ಈ ಬಾರಿ ಕುಬೇರಪ್ಪ ಗೆದ್ದೇ ಗೆಲ್ತಾರೆ ಎಂಬ ಭರವಸೆ ಇದೆ ಎಂದು ಹೇಳಿದರು.


Spread the love

About Laxminews 24x7

Check Also

ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ – ಧಾರವಾಡ ಅರ್ಧ ದಿನ ಬಂದ್!

Spread the loveಧಾರವಾಡ: ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ